ಕಾರ್ಗಿಲ್ ವಿಜಯ ದಿವಸ್: ಯೋಧ ಉಮೇಶ್ ಕೈರಂಗಳ ಅವರಿಗೆ ಸನ್ಮಾನ

ಸೇನೆಗೆ ಸೇರಬೇಕು ಎಂಬ ಆಕಾಂಕ್ಷೆ ಮೊಳಕೆಯೊಡೆದದ್ದು ನನ್ನ ಪ್ರೌಢಶಾಲಾ ದಿನಗಳಲ್ಲಿ. ಅಂದು ತರಗತಿಯಲ್ಲಿ ಅಧ್ಯಾಪಕರು ಸೇನೆಗೆ ಸೇರುವುದರಿಂದ ಆಗುವ ಪ್ರಯೋಜನಗಳು ಮತ್ತು ಗೌರವಗಳ ಬಗ್ಗೆ ವಿವರಿಸಿದ್ದು ಮತ್ತು ಸೇನೆಗೆ ಸೇರಿ ಗೌರವ ಪಡೆಯುತ್ತಿದ್ದ ನನ್ನ ಸಂಬಂಧಿಗಳನ್ನು ನೋಡಿ ನಾನು ಸೈನ್ಯವನ್ನು ಸೇರಿದೆ. ಇದರಿಂದಾಗಿ ನಾನು ಇವತ್ತು ಸಮಾಜದಿಂದ ಗೌರವಿಸಲ್ಪಡುತ್ತಿದ್ದೇನೆ ಎಂದು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಯೋಧ ಉಮೇಶ್ ಕೈರಂಗಳ ಅವರು ಹೇಳಿದರು.

ಜಾಹೀರಾತು

ಜೇಸಿಐ ಜೋಡುಮಾರ್ಗ ನೇತ್ರಾವತಿ ಜ್ಯೂನಿಯರ್ ಜೇಸಿ ವಿಭಾಗ, ಅಳುಪ ಸಮಾಜ ವಿಜ್ಞಾನ ಸಂಘ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ್ ದಿವಸ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತಾನಾಡಿದರು.

ಕಾರ್ಗಿಲ್ ಸೇರಿದಂತೆ ಭಾರತದ ಗಡಿಯಲ್ಲಿ ಸೇವೆ ಸಲ್ಲಿಸುವ ಸೈನಿಕರಿಂದಾಗಿ ನಾವು ಇವತ್ತು ನೆಮ್ಮದಿಯ ಜೀವನ‌ ನಡೆಸುತ್ತಿದ್ದೇವೆ. ಹಾಗಾಗಿ ಸೈನಿಕರಿಗೆ ನೀಡುವ ಗೌರವ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿಗಳು ಇದೇ ತರಹದ ಗೌರವವನ್ನು ನಮ್ಮ ಶಾಲೆಯಲ್ಲಿ ಪಡೆಯುವಂತಾಗಬೇಕು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸುವಂತಾಗಲಿ ಎಂದು ಹೇಳಿದರು. ನಿವೃತ್ತ ಯೋಧ ಹರೀಶ್ ದೇವಂದಬೆಟ್ಟು, ಜೇಸಿಐ ಜೋಡುಮಾರ್ಗ ನೇತ್ರಾವತಿಯ ನಿಕಟ ಪೂರ್ವಾಧ್ಯಕ್ಷ ಹರಿಪ್ರಸಾದ್ ಕುಲಾಲ್, ಶಿಕ್ಷಕರಾದ ಭಾರತಿಹರೀಶ್, ದೇವದಾಸ್ ಕೆ.  ಪ್ರಕಾಶ್, ವರಮಹಾಲಕ್ಷ್ಮೀ, ಹರ್ಷ, ಶಾಲಾ ವಿದ್ಯಾರ್ಥಿ ನಾಯಕಿ ಸಾನ್ವಿ ಉಪಸ್ಥಿತರಿದ್ದರು. ಜೇಜೇಸಿ ಅಧ್ಯಕ್ಷೆ ರಶ್ಮಿತಾ ಸ್ವಾಗತಿಸಿ, ಅಳುಪ ಸಮಾಜವಿಜ್ಞಾನ ಸಂಘದ ಅಧ್ಯಕ್ಷೆ ಮನಸ್ವಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾರ್ಗಿಲ್ ವಿಜಯ ದಿವಸ್: ಯೋಧ ಉಮೇಶ್ ಕೈರಂಗಳ ಅವರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*