ಏಕರೂಪ ನಾಗರಿಕ ಸಂಹಿತೆ ಕುರಿತು ಹಲವು ತಪ್ಪು ಕಲ್ಪನೆಗಳಿವೆ, ಯಾರಿಗೂ ಅದರಿಂದ ಸಮಸ್ಯೆ ಇಲ್ಲ ಎಂಬುದು ಮನದಟ್ಟಾಗಬೇಕು: ಹೈಕೋರ್ಟಿನ ಹಿರಿಯ ನ್ಯಾಯವಾದಿ ಅರುಣಶ್ಯಾಮ್

ಬಂಟ್ವಾಳ: ಧರ್ಮಕ್ಕೂ ಏಕರೂಪ ನಾಗರಿಕ ಸಂಹಿತೆಗೂ ಸಂಬಂಧವೇ ಇಲ್ಲ, ಈ ಕುರಿತು ಹಲವು ತಪ್ಪು ಕಲ್ಪನೆಗಳಿವೆ ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣಶ್ಯಾಮ್ ಹೇಳಿದ್ದಾರೆ.

ಜಾಹೀರಾತು

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ‘ಮಂಥನ’ ಕಾರ್ಯಕ್ರಮ ಪುತ್ತೂರು ವಿವೇಕಾನಂದ ವಿದ್ಯಾಕೇಂದ್ರ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅರುಣಶ್ಯಾಮ್, ಮದುವೆ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ವಿಲೇವಾರಿಗೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಮತ್ತು ಕರ್ತವ್ಯಗಳ ನಿರ್ವಹಣೆಯಲ್ಲಿ ಸಮಾನತೆ ಸಾಧಿಸುವುದು ಏಕರೂಪ ನಾಗರಿಕ ಸಂಹಿತೆ ಉದ್ದೇಶ. ವಿಭಿನ್ನ ಧರ್ಮಗಳಿಗೆ ಸೇರಿದವರಿಗೆಲ್ಲ ಒಂದೇ ಕಾನೂನು ಅನ್ವಯಿಸುವುದೇ ಸಮಾನ ನಾಗರಿಕ ಸಂಹಿತೆಯಾಗಿದೆ. ಪ್ರಮುಖ ಧರ್ಮಗಳ ವೈಯಕ್ತಿಕ ಕಾನೂನುಗಳ ಬದಲಿಗೆ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಕಾಣುವ ಕಾಯಿದೆ ಇದಾಗಿದೆ. ಈ ಕಾಯ್ದೆ ಜಾರಿಗೆ ಬಂದರೆ ಅದರಿಂದ ತಮ್ಮ ವೈಯಕ್ತಿಕ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಒದಗಲಿದೆ ಎಂಬ ಆತಂಕ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಇದೆ.ಆದರೆ ವೈಯುಕ್ತಿಕ ಕಾನೂನುಗಳಲ್ಲಿ ಏಕ ರೂಪತೆ ತರುವುದೇ ಇದರ ನಿಜವಾದ ಉದ್ದೇಶವಾಗಿದೆ. ಧರ್ಮಕ್ಕೂಇದಕ್ಕೂಯಾವುದೇ ಸಂಬಂಧವೇ ಇಲ್ಲ. ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳಲಾಗುವುದಿಲ್ಲ. ಕಾನೂನು ವ್ಯವಸ್ಥೆ ಮೇಲಿನ ಒತ್ತಡ ನಿವಾರಣೆಗೆ, ಜನಸಂಖ್ಯಾ ಸ್ಪೋಟ, ಆರ್ಥಿಕ ತೊಂದರೆ, ನಿರುದ್ಯೋಗ ಮುಂತಾದವುಗಳ ಕಾರಣದಿಂದ ಈ ಕಾಯ್ದೆಯ ಅಗತ್ಯವಿದೆ ಎಂದವರು ಹೇಳಿದರು.

ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಆಡಳಿತ ಮಂಡಳಿ ಸದಸ್ಯರಾದ ಲಕ್ಷ್ಮಿ ರಘುರಾಜ್, ಕೋಶಾಧಿಕಾರಿಯಾದ ಶಿವಗಿರಿ ಸತೀಶ್ ಭಟ್, ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್‌ಎನ್, ರಾಷ್ಟ್ರೀಯ ಸ್ವಯಂಸೇವಿಕ ಸಮಿತಿಯ ಕಾರ್ಯಕಾರಿಣಿ ಸದಸ್ಯರಾದ ಡಾ.ಕಮಲ ಪ್ರಭಾಕರ್ ಭಟ್,  ಶ್ರೀರಾಮ ಪ್ರೌಢಶಾಲೆಯ ಆಡಳಿತಾಧಿಕಾರಿ ಶಾಂಭವಿ ಹಾಗೂ ಶ್ರೀ ರಾಮ ವಿದ್ಯಾಕೇಂದ್ರದ 140 ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪದವಿಪೂರ್ವ ವಿಭಾಗದ ಉಪನ್ಯಾಸಕರಾದ ರಮೇಶ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಏಕರೂಪ ನಾಗರಿಕ ಸಂಹಿತೆ ಕುರಿತು ಹಲವು ತಪ್ಪು ಕಲ್ಪನೆಗಳಿವೆ, ಯಾರಿಗೂ ಅದರಿಂದ ಸಮಸ್ಯೆ ಇಲ್ಲ ಎಂಬುದು ಮನದಟ್ಟಾಗಬೇಕು: ಹೈಕೋರ್ಟಿನ ಹಿರಿಯ ನ್ಯಾಯವಾದಿ ಅರುಣಶ್ಯಾಮ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*