ಬಂಟ್ವಾಳ

ಇರಾ ಯುವಕ ಮಂಡಲ ಸುವರ್ಣಮಹೋತ್ಸವ ಪ್ರಯುಕ್ತ ಕೆಸರ್ಡೊಂಜಿ ದಿನ

ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹಾನ್ ಕಾರ್ಯ ಯುವ ಸಂಘಟನೆಗಳ ಮೂಲಕ ನಡೆಯಬೇಕಿದೆ. ಎಲ್ಲರೂ ಜತೆಗೂಡಿ ಸಂಭ್ರಮಿಸುವ ಹಾಗೂ ಕೆಸರಿನಲ್ಲಿ ಆಟ ಕೂಟದ ಮೂಲಕ ಭಾತೃತ್ವ ಬೆಳೆಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಜಾಹೀರಾತು

ಚಿತ್ರಗಳು: ಅಪುಲ್ ಇರಾ

ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ಇರಾ ಬಾವಬೀಡು ಗದ್ದೆಯಲ್ಲಿ ರವಿವಾರ ಆಯೋಜಿಸಲಾದ ಕೆಸರ್‌ಡೊಂಜಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಮುಖರಾದ ವೇಣುಗೋಪಾಲ ಭಂಡಾರಿ ಬಾವಬೀಡು, ಸುಜಾತ ಕೆ.ರೈ ಬಾವಬೀಡು, ಡಾ|ಸತೀಶ್ ಭಂಡಾರಿ, ಮಡ್ವಬೀಡು ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ, ಬಂಟ್ವಾಳ ತಾಲೂಕು ಪಂಚಾಯತ್‌ನ ನಿಕಟ ಪೂರ್ವ ಅಧ್ಯಕ್ಷ ಚಂದ್ರಹಾಸ ಆರ್.ಕರ್ಕೇರ, ಇರಾ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ, ಸದಸ್ಯ ಅಬ್ದುಲ್ ರಜಾಕ್ ಕುಕ್ಕಾಜೆ, ಪ್ರಮುಖರಾದ ಮಹಾಬಲ ರೈ ಯಾನೆ ಕೋಟಿ ಶೆಟ್ಟಿ ಕಿನ್ನಿಮಜಲು, ಶ್ರೀಧರ ಶೆಟ್ಟಿ ಯಾನೆ ಸಂಕು ಶೆಟ್ಟಿ ಕಲ್ಲಾಡಿ, ಕಿರಣ್ ರೈ ಯಾನೆ ಕೋಟಿ ಶೆಟ್ಟಿ ಕಲ್ಲಾಡಿ, ಭಾಸ್ಕರ ಪೂಜಾರಿ ಯಾನೆ ಮಂಙಣ್ಣ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು

ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಪಿ.ಎಂ.ಕೊಡಂಗೆ, ಪ್ರಧಾನ ಸಂಚಾಲಕ ಜಗದೀಶ್ ಶೆಟ್ಟಿ ಇರಾಗುತ್ತು, ಅಧ್ಯಕ್ಷ ಜಯರಾಮ ಪೂಜಾರಿ ಸೂತ್ರಬಲು, ಯುವಕ ಮಂಡಲದ ಅಧ್ಯಕ್ಷ ಗಣೇಶ್ ಎಸ್. ಅತ್ತಾವರ ಭಾಗವಹಿಸಿದ್ದರು. ಪುಷ್ಪರಾಜ ಕುಕ್ಕಾಜೆ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ