ಸರಕಾರಿ ಪ್ರೌಢಶಾಲೆ ಪೊಳಲಿ ಮುಖ್ಯ ಶಿಕ್ಷಕ ರಾಧಾಕೃಷ್ಣ ಭಟ್ ಅವರಿಗೆ ನಿವೃತಿ, ಬೀಳ್ಕೊಡುಗೆ ಸಮಾರಂಭ

ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ರಾಧಾಕೃಷ್ಣರ ಕಾರ್ಯಗಳು ಅವಿಸ್ಮರಣಿಯ ಎಂದು ಪೊಳಲಿಯ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು.

ಪೊಳಲಿ ಸರ್ವಮಂಗಳ  ಸಭಾಂಗಣದಲ್ಲಿ ನಡೆದ ಶ್ರೀ  ರಾಜರಾಜೇಶ್ವರೀ ಸರಕಾರಿ  ಪ್ರೌಢಶಾಲೆ ಪೊಳಲಿ ಇಲ್ಲಿಯ ಮುಖ್ಯ ಶಿಕ್ಷಕರಾದ  ರಾಧಾಕೃಷ್ಣ ಭಟ್ ಪೊಳಲಿ  ಇವರ ಸೇವಾ ನಿವೃತ್ತಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಶ್ರೀ ರಾಜರಾಜೇಶ್ವರೀ ಸರಕಾರಿಪ್ರೌಢಶಾಲೆ  ವತಿಯಿಂದ  ರಾಧಕೃಷ್ಣ ಭಟ್  ತನುಜ ಅರ್ ಭಟ್ ದಂಪತಿಗಳಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.

ರಾಜ್ಯ ಸರಕಾರಿ ನೌಕರರ ಸಂಘ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ,ಉಪನಿರ್ದೇಶಕರ ಕಚೇರಿಯಿಂದ ಉಪನಿರ್ದೇಶಕರು ಮತ್ತು ಉಪನ್ಯಾಸಕರು, ಅತ್ತಾವರ ಪ್ರೌಢಶಾಲೆ ಶಿಕ್ಷಕರು, ರೋಟರಿ ಕ್ಲಬ್ ಬಂಟ್ವಾಳ, ಸರ್ಕಾರಿ ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಉಪನ್ಯಾಸಕರು, ಜಂಟಿ ನಿರ್ದೇಶಕರು, ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ,ಶ್ರೀ ವಿದ್ಯಾವಿಲಾಸ ಶಾಲೆ ಪೊಳಲಿ ವತಿಯಿಂದ ಸನ್ಮಾನ ಅಭಿನಂದನೆ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಕಾರ್ಯದರ್ಶಿ ವೆಂಕಟೇಶ್ ನಾವಡ ಪೊಳಲಿ,  ಕರಿಯಂಗಳ ಗ್ರಾ.ಪಂ.ಸದಸ್ಯ ಲೋಕೇಶ್ ಭರಣಿ, ಸಿ.ಆರ್.ಪಿ ಪ್ರೇಮಲತಾ, ಮುರಳಿಕೃಷ್ಣರಾವ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಉಪಸ್ಥಿತರಿದ್ದರು.

ಶಿಕ್ಷಕಿಯಾದ ರಂಜಿತ ಮತ್ತು ವಿದ್ಯಾರ್ಥಿಗಳಾದ ಚಿನ್ಮಯ್ ಮಹಮ್ಮದ್ ಅನಾಸ್ ಅನಿಸಿಕೆ ತಿಳಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಜಾನೆಟ್ ಲೋಬೊ ಸ್ವಾಗತಿಸಿದರು. ಜಯಂತ್ ಆಚಾರ್ಯ ವಂದಿಸಿದರು. ಮುರಳಿಧರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಕಾರಿ ಪ್ರೌಢಶಾಲೆ ಪೊಳಲಿ ಮುಖ್ಯ ಶಿಕ್ಷಕ ರಾಧಾಕೃಷ್ಣ ಭಟ್ ಅವರಿಗೆ ನಿವೃತಿ, ಬೀಳ್ಕೊಡುಗೆ ಸಮಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*