ವಿಟ್ಲ

ಆಗಸ್ಟ್ 8ರಂದು ಒಡಿಯೂರು ಶ್ರೀಗಳ ಜನ್ಮದಿನೋತ್ಸವ, ಗ್ರಾಮೋತ್ಸವ..ಇಲ್ಲಿದೆ ವಿವರ

ಜಾಹೀರಾತು

ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ವತಿಯಿಂದ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ ಗ್ರಾಮೋತ್ಸವ, ಗುರುವಂದನಾ, ಸೇವಾ ಸಂಭ್ರಮ ಕಾರ್ಯಕ್ರಮಗಳು ಆಗಸ್ಟ್ 8ರಂದು ನಡೆಯಲಿದೆ.

ಬೆಳಗ್ಗೆ 8ರಿಂದ ಗಣಪತಿ ಹವನ, ಮಹಾಪೂಜೆ, ಬೆಳಗ್ಗೆ 9ರಿಂದ ಅರವಿಂದ ಆಚಾರ್ಯ ಮಾಣಿಲ, ಬಳಗದವರಿಂದ ದಾಸವಾಣಿ ಇರಲಿದೆ. 9.30ರಿಂದ ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನೆ, 11.30ರಿಂದ ಸಭಾ ಕಾರ್ಯಕ್ರಮ ಇರಲಿದೆ.

ಜಾಹೀರಾತು

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ಇರಲಿದೆ. ವಿಶೇಷ ಆಹ್ವಾನಿತರಾಗಿ ಶಾಸಕ ರಾಜೇಶ್ ನಾಯ್ಕ್, ಉದ್ಯಮಿ ರವಿನಾಥ್ ವಿ.ಶೆಟ್ಟಿ ಅಂಕ್ಲೇಶ್ವರ ಭಾಗವಹಿಸುವರು. ಶ್ರೀ ಸಂಸ್ಥಾನದಿಂದ ವಿಶೇಷ ಗೌರವ ಪುರಸ್ಕಾರವನ್ನು ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಆಳ್ವಾಸ್ ನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ಸಂಗೀತ ನಿರ್ದೇಶಕ ಶಂಕರ ಶ್ಯಾನುಭಾಗ, ಉದ್ಯಮಿ ಶಶಿಧರ ಬಿ.ಶೆಟ್ಟಿ ಬರೋಡ ಭಾಗವಹಿಸುವರು. ಸಂಜೆ ಮಧು ಬಂಗೇರ ಕಲ್ಲಡ್ಕ ಸಾರಥ್ಯದಲ್ಲಿ ನಾಟಕ ಕೊಪ್ಪರಿಗೆ ಇರಲಿದೆ. ರಾತ್ರಿ ಬೆಳ್ಳಿ ರಥೋತ್ಸವ, ಮಹಾಪೂಜೆ ನಡೆಯಲಿದೆ ಎಂದು ಒಡಿಯೂರಿನ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts