ಜಿಲ್ಲಾ ಸುದ್ದಿ

ಆಗಸ್ಟ್ 12ರಂದು ಭ್ರಾಮರೀ ಯಕ್ಷವೈಭವ, ಮಂಗಳೂರು ಪುರಭವನದಲ್ಲಿ ಹಿರಿಯ ಕಲಾವಿದರಿಗೆ ಸನ್ಮಾನ ರಾತ್ರಿಯಿಡೀ ಯಕ್ಷಗಾನ.. ವಿವರ ಇಲ್ಲಿದೆ

ಮಂಗಳೂರು: ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 12 ಶನಿವಾರದಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ – 2023 ಜರಗಲಿದೆ.

ಜಾಹೀರಾತು

ಸಂಜೆ 7 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು .ಹಿರಿಯ ಯಕ್ಷಗಾನ ವಿದ್ವಾಂಸ,ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ತುಳು ಸಂಘ ಬರೋಡಾ ದ ಅಧ್ಯಕ್ಷ ಶಶಿಧರ್ ಶೆಟ್ಟಿ, ಮನಾಪ ಮೇಯರ್ ಜಯಾನಂದ ಅಂಚನ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್,ಉದ್ಯಮಿ ಚಂದ್ರಶೇಖರ ಮಾಡ ಕುದ್ರಾಡಿಗುತ್ತು ಭಾಗವಹಿಸಲಿದ್ದಾರೆ.

ಜಾಹೀರಾತು

ಹಿರಿಯ ಯಕ್ಷಗಾನ ಕಲಾವಿದ ಕೋಡಿ ಕೃಷ್ಣ( ಕುಷ್ಟ)ಗಾಣಿಗ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಭ್ರಾಮರೀ ಯಕ್ಷಸೇವಾಪುರಸ್ಕಾರವನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಮಂಗಳೂರು ಹಾಗೂ ಕಟೀಲು ಮೇಳದ ನೇಪಥ್ಯ ಕಲಾವಿದ ವಿಠಲ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗುವುದು. ರಾತ್ರಿ 9 ರಿಂದ ಚೆಂಡೆ ಜುಗಲ್‌ಬಂದಿ, ನಾಡಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಶರಣ ಸೇವಾರತ್ನ,ರಾಣಿ ಶಶಿಪ್ರಭೆ,ಶ್ರೀ ದೇವಿ ಕೌಶಿಕೆ ಎಂಬ ಯಕ್ಷಗಾನ ಜರಗಲಿದ್ದು.ಈ ಎಲ್ಲಾ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts