ಬಂಟ್ವಾಳ: ಕಲ್ಲಡ್ಕದ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಆಗಸ್ಟ್ 13ರಂದು ಹಿಂದು ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ನಡೆಯಲಿದೆ.
ಈ ಸಂದರ್ಭ ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀರಾಮ ಮಂದಿರ ಶ್ರೀ ರಾಮಾಂಜನೇಯ ಟ್ರಸ್ಟ್ ಕಾರ್ಯದರ್ಶಿ ನಾಗೇಶ್ ಕಲ್ಲಡ್ಕ ಅಧ್ಯಕ್ಷತೆ ವಹಿಸುವರು. ವಿಹಿಂಪ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಘು ಸಕಲೇಶಪುರ ದಿಕ್ಸೂಚಿ ಭಾಷಣ ಮಾಡುವರು. ನಿವೃತ್ತ ಸೈನಿಕ ಗೋಪಾಲಕೃಷ್ಣ ಭಟ್ ಮಾದಕಟ್ಟೆ ಉಪಸ್ಥಿತರಿರುವರು ಎಂದು ಹಿಂಜಾವೇ ಪ್ರಕಟಣೆ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ"