ಕಲ್ಲಡ್ಕ

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಾಹಿತ್ಯ ಪೂರಕ: ರಮೇಶ ಬಾಯಾರು

ಜಾಹೀರಾತು

ಬಂಟ್ವಾಳ: ವಿದ್ಯಾರ್ಥಿಗಳು ಸಾಹಿತ್ಯ ವಾಚನದಿಂದ ರಸಾಸ್ವಾದನೆ ಮಾಡಬೇಕು. ಭಾಷಾ ಜ್ಞಾನ ಮತ್ತು ವಿಷಯ ಪ್ರಾವಿಣ್ಯತೆ ಪಡೆಯಬೇಕು. ಸಾಹಿತ್ಯ ಸ್ವರಚನೆಯಲ್ಲೂ ತೊಡಗಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಾಹಿತ್ಯ ಪೂರಕವಾಗುತ್ತದೆ ಎಂದು ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರಮೇಶ ಎಂ. ಬಾಯಾರು ಹೇಳಿದರು.

ಜಾಹೀರಾತು

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಲ್ಲಡ್ಕ ಮತ್ತು ಬಾಳ್ತಿಲ ಕ್ಲಸ್ಟರ್ ಗಳ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದರು. ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಸಾಹಿತಿ ಭಾಸ್ಕರ ಅಡ್ವಳ ಸಹಕರಿಸಿದರು. ನರಿಕೊಂಬು ಶಾಲಾ ಮುಖ್ಯ ಶಿಕ್ಷಕ ಜಯರಾಮ ಪಡ್ರೆ ಉಪಸ್ಥಿತರಿದ್ದರು.. ಮಕ್ಕಳ ಕಲಾ ಲೋಕದ ಉಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts