ವಾಮದಪದವು

ಸಿದ್ಧಕಟ್ಟೆಯಲ್ಲಿ ಬಂಟ್ವಾಳ ಜೈನ್ ಮಿಲನ್ ಪದಾಧಿಕಾರಿಗಳ ಪದಗ್ರಹಣ

ಜಾಹೀರಾತು

ಬಂಟ್ವಾಳ: ಭಾರತೀಯ ಜೈನ್ ಮಿಲನ್ ಬಂಟ್ವಾಳ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಆಟಿಕೂಟ ಕಾರ್ಯಕ್ರಮ ಸಿದ್ಧಕಟ್ಟೆ ಬಸದಿಯ ಸ್ವಸ್ತಿಕ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಿಲನ್ ನಿಕಟಪೂರ್ವ ಅಧ್ಯಕ್ಷರಾದ ದೀಪಕ್ ಕುಮಾರ್ ಜೈನ್ ವಹಿಸಿದ್ದರು. ದೀಪ ಬೆಳಗಿಸಿ ಉದ್ಘಾಟಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಸಮಾನತೆ ಸಹೋದರತೆ ಇದ್ದಾಗ ಸಮಾಜದಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ .ಬದಲಾದ ಸಮಾಜಕ್ಕೆ ಹೊಂದಿಕೊಂಡು ಬದುಕುವ ಅನಿವಾರ್ಯತೆಯ ಬಗ್ಗೆ ತಿಳಿಸಿದರು .

ಪದ ಪ್ರಧಾನ ಪೌರೋಹಿತ್ಯವನ್ನು ಮಿಲನ್ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಕಾಲೇಜ್ ಮೂಡುಬಿದ್ರೆಯ ಅಧ್ಯಕ್ಷರಾದ ಯುವರಾಜ್ ಜೈನ್, ಮಿಲನ್ ಮಂಗಳೂರು ವಿಭಾಗ ಉಪಾಧ್ಯಕ್ಷ ಪ್ರಮೋದ್ ಕುಮಾರ್, ಮಿಲನ್ ನಿರ್ದೇಶಕ ಮೂಡುಬಿದಿರೆಯ ಜಯರಾಜ ಕಂಬಳಿ ಭಾಗವಹಿಸಿದ್ದರು. ಮಿಲನ್ ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಆಟಿಕೂಟದ ಮಹತ್ವದ ಬಗ್ಗೆ ಮಾತನಾಡಿದರು. ಬಂಟ್ವಾಳ ಜೈನ್ ಮಿಲನ್ ನೂತನ ಅಧ್ಯಕ್ಷರಾಗಿ ಮಧ್ವರಾಜ್ ಜೈನ್ ಪಂಜಾಲು ಆಯ್ಕೆಯಾದರು. ವಿನಯಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು .ಡಾ. ಸುದೀಪ್ ಕುಮಾರ್ ಸಿದ್ಧಕಟ್ಟೆ ಸ್ವಾಗತಿಸಿ ನೂತನ ಕಾರ್ಯದರ್ಶಿ ಭರತ್ ಕುಮಾರ್ ವಂದಿಸಿದರು.

 

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.