ಮೆಲ್ಕಾರ್ ಉಳಿಸಲು ಹೋರಾಟ ಸಮಿತಿ ರಚನೆ: ಸಂಸದ, ಶಾಸಕರಿಗೆ ಮನವಿ ಅರ್ಪಣೆ, ಶೀಘ್ರ ಜನಪ್ರತಿನಿಧಿಗಳಿಂದ ವೀಕ್ಷಣೆ

ಜಾಹೀರಾತು

ಜಾಹೀರಾತು

ರಸ್ತೆಯಲ್ಲಿ ಅಂಡರ್ ಪಾಸ್ ನಿರ್ಮಾಣದ ಸಂದರ್ಭ ಉಂಟಾಗುವ ಸಮಸ್ಯೆಗಳ ಕುರಿತು ಮೆಲ್ಕಾರ್ ಗೆ ಸಂಬಂಧಿಸಿದ ವರ್ತಕರು, ನಾಗರಿಕರು ಮೆಲ್ಕಾರ್ ಸಿಟಿಯನ್ನ ಉಳಿಸಲು ಹೋರಾಟ ಸಮಿತಿಯೊಂದನ್ನು ರಚಿಸಿದ್ದಾರೆ. ಇತ್ತೀಚೆಗೆ ಮೆಲ್ಕಾರ್ ನಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಡಾ.ಪ್ರಶಾಂತ್ ಮಾರ್ಲ, ಸಂಜೀವ ಪೂಜಾರಿ ಬಿರ್ವ, ಅಧ್ಯಕ್ಷರಾಗಿ ಉದಯ ಪೈ, ಉಪಾಧ್ಯಕ್ಷರಾಗಿ ಎಂ.ಎನ್.ಕುಮಾರ್, ದಾಮೋದರ್ ಮೆಲ್ಕಾರ್, ಅಬ್ದುಲ್‌ ರಝಕ್ ಮೆಲ್ಕಾರ್, ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಚ್.ಮುಸ್ತಫಾ, ಜೊತೆ ಕಾರ್ಯದರ್ಶಿಗಳಾಗಿ ನವೀನ್ ಪ್ರಕಾಶ್, ಲಕ್ಷಣ್, ವಿನ್ಸಿ, ಈಶ್ವರ್, ಕೋಶಾಧಿಕಾರಿಯಾಗಿ ಕಿಶೋರ್, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಬಿ.ಅಬ್ದುಲ್ ಬಶೀರ್ ಅಹಮದ್ ಬೊಂಡಾಲ, ಸಂಘಟನಾ ಕಾರ್ಯದರ್ಶಿಗಳಾಗಿ ಸತೀಶ್ ಪಿ ಸಾಲ್ಯಾನ್, ಮಹಮ್ಮದ್, ಸಂತೋಷ್, ಕೆ.ರಮ್ಲಾ, ರಾಜ್, ದಯಾನಂದ್ ಆಯ್ಕೆಯಾದರು.

ಮೆಲ್ಕಾರ್ ಸಿಟಿ ಉಳಿಸಿ ಹೋರಾಟ ಸಮಿತಿ ಗೌರವಾಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳ ನಿಯೋಗ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಭೇಟಿಯಾಯಿತು. ಈ ಸಂದರ್ಭ ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ಮತ್ತು ಹೆದ್ದಾರಿ ವಿಭಜನೆ ವಿಚಾರದ ಕುರಿತು ಚರ್ಚಿಸಲಾಗಿ, ಮನವಿ ಸಲ್ಲಿಸಲಾಯಿತು.

ಜಾಹೀರಾತು

ಪೂರಕವಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರು ಹೆದ್ದಾರಿ ಇಲಾಖೆಯ ಮುಖ್ಯಸ್ಥರನ್ನು ಕರೆಯಿಸಿ,  ಪದಾಧಿಕಾರಿಗಳೊಂದಿಗೆ ಮುಖಾಮುಖಿಯಾಗಿ ಚರ್ಚಿಸಿ ಮೆಲ್ಕಾರ್ ನಗರಕ್ಕೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಬೇಕೆಂದು ತಿಳಿಸಿದರು. ಅದರೊಂದಿಗೆ ಒಂದೆರಡು ದಿನಗಳಲ್ಲಿ ಪ್ರದೇಶಕ್ಕೆ ಸಂಸದರು ಬರಲಿದ್ದು, ಶಾಸಕರು ಹಾಗೂ ಇಲಾಖೆಯ ಅಧಿಕಾರಿಗಳು ಕೂಡಾ ಉಪಸ್ಥಿತರುತ್ತಾರೆ. ಈ ಸಂದರ್ಭ ಉಪಾಧ್ಯಕ್ಷರಾದ ಎಂ. ಎನ್. ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಎಚ್. ಮುಸ್ತಾಫಾ, ಕೋಶಾಧಿಕಾರಿ ಕಿಶೋರ್ ಕುದ್ಮುಲ್, ಕಾರ್ಯದರ್ಶಿ ಈಶ್ವರ್, ಪಿ.ಆರ್.ಓ. ಅಬ್ದುಲ್ ಬಶೀರ್ ಅಹಮ್ಮದ್, ಸಂಘಟನಾ ಕಾರ್ಯದರ್ಶಿಗಳಾದ ಸತೀಶ್ ಪಿ. ಸಾಲಿಯಾನ್, ಮಹಮ್ಮದ್ ಕೊಹಿನೂರು, ಅನಿಲ್ ಕುಮಾರ್ ಮೆಲ್ಕಾರ್ ಹಾಗೂ ದಾಮೋದರ್ ಬಿ.ಎಂ. ಮೆಲ್ಕಾರ್ ಬಾಗವಹಿಸಿದ್ದು, ಶಾಸಕರು, ಜಿಲ್ಲಾಧಿಕಾರಿಗಳು, ಹೆದ್ದಾರಿ ಇಲಾಖೆಯ ಪ್ರೊಜೆಕ್ಟ್ ಡೈರೆಕ್ಟರ್ ಅವರಿಗೂ ಮನವಿಯನ್ನು ಮುಖತಃ ಸಲ್ಲಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೆಲ್ಕಾರ್ ಉಳಿಸಲು ಹೋರಾಟ ಸಮಿತಿ ರಚನೆ: ಸಂಸದ, ಶಾಸಕರಿಗೆ ಮನವಿ ಅರ್ಪಣೆ, ಶೀಘ್ರ ಜನಪ್ರತಿನಿಧಿಗಳಿಂದ ವೀಕ್ಷಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*