ಪ್ರಮುಖ ಸುದ್ದಿಗಳು

ಮಂಗಳೂರಿನಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರ ಬಂಧನ- ರೂ 4.24 ಲಕ್ಷ ವಶ

 

ಜಾಹೀರಾತು

ಮಂಗಳೂರು ನಗರದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಇಬ್ಬರನ್ನು ‌ಬಂಧಿಸಿ ಅವರಿಂದ ರೂ 4.24 ಲಕ್ಷ  ನಗದನ್ನು ವಶಪಡಿಸಿಕೊಳ್ಳುವಲ್ಲಿ ಉರ್ವ ಠಾಣ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಚಿಲಿಂಬಿಯ ಗೋಕುಲದಾಸ್ ಶೆಣೈ,  ಕೋಡಿಕಲ್ ನ ದೀಪಕ್ ಶೆಟ್ಟಿ  ಬಂಧಿತರು. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವಾ ಸ್ಟೋರ್ ಮೈದಾನ ಬದಿಯಲ್ಲಿರುವ ಕಾಪೋರೇಶನ್ ಕಟ್ಟಡದ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಇವರು ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದರು.

ಆರೋಪಿಗಳ ವಶದಲ್ಲಿದ್ದ, ಮಟ್ಕಾ ಚೀಟಿ ಗೆ ಸಂಬಂದಿಸಿದ ರೂ 424490 /- ( ನಾಲ್ಕು ಲಕ್ಷದ ಇಪ್ಪತ್ತನಾಲ್ಕು ಸಾವಿರದ ನಾಲ್ಕು ನೂರ ತೊಂಬತ್ತು ರೂಪಾಯಿ ) ನಗದು, ಮೊಬೈಲ್‌ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.  ಉರ್ವಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಯವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣಾ ಪಿಐ  ಭಾರತಿ, ರವರ ತಂಡ ಹರೀಶ್ ಹೆಚ್.ವಿ ಪಿಎಸ್‌ಐ ಸಫ್ರೀನಾ, ವೆಂಕಟೇಶ್, ರಾಮಚಂದ್ರ, ಸುನೀತ, ಭರಣಿ ದೀಕ್ಷಿತ್, ರವರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts