ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆ.21ರ ಸೋಮವಾರ ನಾಗರ ಪಂಚಮಿ ಉತ್ಸವ ಮತ್ತು ಸಾರ್ವಜನಿಕ ಆಶ್ಲೇಷ ಬಲಿಪೂಜೆ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಜರಗಲಿದೆ.ಬೆಳಗ್ಗೆ 10.00ಗಂಟೆಗೆ ಸ್ವಯಂ ನಾಗರಾಜ ಸನ್ನಿಧಿಯಲ್ಲಿ ಅಭಿಷೇಕ, ನಾಗತಂಬಿಲ ಬಳಿಕ ಆಶ್ಲೇಷ ಬಲಿಪೂಜೆ ಆರಂಭ. ಶ್ರೀಗಳಿಂದ ನಾಗರಪಂಚಮಿಯ ಸಂದೇಶ ಅನಂತರ ಮಹಾಪೂಜೆ, ಮಹಾಸಂತರ್ಪಣೆ ನಡೆಯಲಿದೆ. ಅಪರಾಹ್ಣ ಗಂಟೆ 2.30ರಿಂದ ನಿಡ್ಲೆ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಭೀಮಾಂಜನೇಯ-ಕಾರ್ತಿಕೇಯ ಕಲ್ಯಾಣ ಯಕ್ಷಗಾನ ಬಯಲಾಟ ಜರಗಲಿದೆ ರಾತ್ರಿ ರಂಗಪೂಜೆ, ಮಹಾಪೂಜೆ ನಡೆಯಲಿದೆ ಪ್ರಕಟಣೆ ತಿಳಿಸಿದೆ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಒಡಿಯೂರಿನಲ್ಲಿ ನಾಗರ ಪಂಚಮಿ: ಸಾರ್ವಜನಿಕ ಆಶ್ಲೇಷ ಬಲಿಪೂಜೆ"