ಸೌಜನ್ಯಾ ಹತ್ಯೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬಂಟ್ವಾಳ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ಬಂಟ್ವಾಳ ತಾಲೂಕು ಸಂಚಾಲಕ ಪ್ರತೀಕ್ ಬಂಟ್ವಾಳ ನೇತೃತ್ವದಲ್ಲಿ ಈ ಮನವಿಯನ್ನು ಮಾಡಲಾಯಿತು.
ಜಾಹೀರಾತು
ನೈಜ ಅಪರಾಧಿಗಳನ್ನು ಪತ್ತೆ ಮಾಡಿ ಬಂದಿಸಿ ಸೌಜನ್ಯಳಿಗೆ ಹಾಗೂ ನೊಂದ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ. ಒಂದು ವೇಳೆ ರಾಜ್ಯ ಸರ್ಕಾರವು ಮರು ತನಿಖೆಗೆ ಆದೇಶಿಸದೆ ನ್ಯಾಯ ಒದಗಿಸುವಲ್ಲಿ ವಿಫಲವಾದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು. ಸೌಜನ್ಯ ಹಾಗೂ ಸಂಬಂಧಿತ ಘಟನೆಯನ್ನು ದಾಳವಾಗಿ ಉಪಯೋಗಿಸಿ ಧಾರ್ಮಿಕ ಶ್ರದ್ದಾ ಕೇಂದ್ರಗಳ ಘನತೆಗೆ ಮತ್ತು ಸಾಮಾನ್ಯ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ರಾಜ್ಯ ಸರ್ಕಾರ ಗಮನಿಸಿ ಕೂಡಲೆ ಹತ್ತಿಕ್ಕಬೇಕು ಎಂದೂ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಈ ಸಂದರ್ಭ ಬಂಟ್ವಾಳ ತಾಲೂಕು ಸಂಚಾಲಕರಾದ ಪ್ರತೀಕ್ ಬಂಟ್ವಾಳ ಹಾಗೂ ಎಬಿವಿಪಿ ಪ್ರಮುಖರಾದ ಸುಶಾಂತ್ ,ಕಿಶೋರ್, ಇಂಚರಾ, ಪುನೀತ್ ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹತ್ಯೆ ಪ್ರಕರಣ ಮರುತನಿಖೆಗೆ ಎಬಿವಿಪಿ ಒತ್ತಾಯ"
Be the first to comment on "ಹತ್ಯೆ ಪ್ರಕರಣ ಮರುತನಿಖೆಗೆ ಎಬಿವಿಪಿ ಒತ್ತಾಯ"