ಬಂಟ್ವಾಳ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಜಾಹೀರಾತು
ಅಟೋ ಚಾಲಕ ಮಹಮ್ಮದ್ ಸಾದಿಕ್ ಎಂಬಾತನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸುರಕ್ಷಾ ಅಧಿಕಾರಿಯೋರರ್ವರನ್ನು ರಿಕ್ಷಾದಲ್ಲಿ ಮಹಮ್ಮದ್ ಸಾದಿಕ್ ಕರೆದುಕೊಂಡು ಹೋಗುವ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬರುವ ಕಾರೊಂದು ರೈಲು ನಿಲ್ದಾಣದ ಸಮೀಪವಿರುವ ಲಯನ್ಸ್ ಸೇವಾ ಮಂದಿರದ ಪಾರ್ಕ್ ನ ಮುಂಭಾಗದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ.ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯವಾಗಿದೆ. ಚಾಲಕರಿಗೆ ತೀವ್ರ ಗಾಯವಾಗಿದೆ. ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಆಟೊರಿಕ್ಷಾಕ್ಕೆ ಕಾರು ಡಿಕ್ಕಿ: ಚಾಲಕ, ಪ್ರಯಾಣಿಕರಿಗೆ ಗಾಯ"