ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ವ್ಯಕ್ತಿಯೊಬ್ಬ ಮೊಬೈಲ್ ನಿಂದ ಗೋಡೆ ಸೆರೆಯ ಮಧ್ಯೆ ಚಿತ್ರೀಕರಿಸಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದೂರು ಬಂದ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅನುಮಾನಾಸ್ಪದ ವರ್ತನೆಯ ವ್ಯಕ್ತಿಯೋರ್ವನನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತನನ್ನು ಜಗದೀಪ್ ಎಂದು ಗುರುತಿಸಲಾಗಿದೆ.
ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ ಮಹಿಳೆ ತನ್ನ ಹಂಚಿನಮನೆಯೊಳಗಿರುವ ಬಚ್ಚಲುಕೋಣೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ ಗೋಡೆಯ ಸೆರೆಯ ಮಧ್ಯೆ ತನ್ನ ಮೊಬೈಲ್ ಮೂಲಕ ಮಹಿಳೆ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದನ್ನು ಗಮನಿಸಿ, ತಕ್ಷಣ ಬೊಬ್ಬೆ ಹೊಡೆದಿದ್ದಾರೆ. ಈ ಸಂದರ್ಭ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದಾನೆ. ಬಳಿಕ ಮಹಿಳೆಯ ಬೊಬ್ಬೆ ಕೇಳಿ, ತಾಯಿ ಮತ್ತು ಅಕ್ಕಪಕ್ಕದ ಮನೆಯವರು ಬಂದು, ಓಡಿಹೋದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದರೂ ಆತ ಕಂಡುಬಂದಿಲ್ಲ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಾದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅನುಮಾನದಲ್ಲಿ ಜಗದೀಪ್ ನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡರು. ಇದೀಗ ಆತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…