ಬಂಟ್ವಾಳ ಕನ್ನಡ ಭವನದಲ್ಲಿ ಏರ್ಯ ಸಂಸ್ಮರಣೆ, ಕಾವ್ಯವಾಚನ-ವ್ಯಾಖ್ಯಾನ

ಬಂಟ್ವಾಳ: ಬಂಟ್ವಾಳ ಕನ್ನಡ ಭವನದಲ್ಲಿ ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಮತ್ತು ಅಭಿರುಚಿ ಜೋಡುಮಾರ್ಗ ಸಹಯೋಗದೊಂದಿಗೆ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಕಾವ್ಯವಾಚನ, ವ್ಯಾಖ್ಯಾನ ನಡೆಯಿತು.

ಜಾಹೀರಾತು

ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಜ್ಯೋತಿ ಬೆಳಗಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಸಂಶೋಧನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಸಂಸ್ಮರಣಾ ಭಾಷಣ ಮಾಡಿ, ಏರ್ಯರು ಸಾಹಿತ್ಯ, ಸಹಕಾರ,ಶಿಕ್ಷಣ ಹೀಗೆ ಹಲವು ರಂಗಗಳಲ್ಲಿ ಕ್ರಿಯಾಶೀಲರಾಗಿದ್ದ ಹಿರಿಯರು.ಆಯಾ ಕ್ಷೇತ್ರಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದ ಕಿರಿಯರನ್ನು, ಯುವಕರನ್ನು ಬೆನ್ನುತಟ್ಟಿ ಮುನ್ನಡೆಸಿದ ಬಗೆ ಅನನ್ಯವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಾಹೀರಾತು

ಬಳಿಕ ಗಮಕಿ ಮಂಜುಳಾ ಸುಬ್ರಹ್ಮಣ್ಯ ಹಾಗೂ ವಾಮದಪದವು ಸರ್ಕಾರಿ ಪ್ರ.ದ. ಕಾಲೇಜಿನ ಉಪನ್ಯಾಸಕಿ ರೇಶ್ಮಾ ಭಟ್ ಅಜಕ್ಕಳ ಅವರಿಂದ ಪಂಪ ಭಾರತದ ದ್ರೋಣ-ದ್ರುಪದ ಭಾಗದ ಕಾವ್ಯವಾಚನ -ವ್ಯಾಖ್ಯಾನ ನಡೆಯಿತು..ಕ.ಸಾ.ಪ. ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಅಭಿರುಚಿ ಅಧ್ಯಕ್ಷ ಎಚ್.ಸುಂದರ ರಾವ್  ಉಪಸ್ಥಿತರಿದ್ದರು. ಕ.ಸಾ.ಪ.ತಾಲೂಕು ಘಟಕದ ಗೌ.ಕಾರ್ಯದರ್ಶಿ ವಿ.ಸು.ಭಟ್ ಸ್ವಾಗತಿಸಿದರು. ಅಭಿರುಚಿ’ ಜೋಡುಮಾರ್ಗ ಕಾರ್ಯದರ್ಶಿ ಮಹಾಬಲೇಶ್ವರ ಹೆಬ್ಬಾರ್ ವಂದಿಸಿದರು. ಬಿ.ಮೂಡ ಸರ್ಕಾರಿ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಯರು ನಾಡಗೀತೆ ಹಾಡಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕನ್ನಡ ಭವನದಲ್ಲಿ ಏರ್ಯ ಸಂಸ್ಮರಣೆ, ಕಾವ್ಯವಾಚನ-ವ್ಯಾಖ್ಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*