ಪ್ರಮುಖ ಸುದ್ದಿಗಳು

ಪ್ರೊ.ಸುಬ್ರಹ್ಮಣ್ಯ ಭಟ್ ಅವರಿಗೆ ಡಾಕ್ಟರೇಟ್ ಪದವಿ

ಮಂಗಳೂರು: ನಗರದ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಸಯನ್ಸ್ ಅಂಡ್ ಇನ್ಫಾರ್ಮೇಶನ್ ಸಯನ್ಸ್ ಡೀನ್ ಪ್ರೊ. ಸುಬ್ರಹ್ಮಣ್ಯ ಭಟ್ ಇವರ ಇಂಪ್ಲಿಮೆಂಟೇಶನ್ ಅಂಡ್ ಇವಾಲ್ಯುವೇಶನ್ ಆಫ್ ಅಡಾಪ್ಟಿವ್ ಡೈರೆಕ್ಟರಿ ಬೇಸ್ಡ್ ಕ್ಯಾಶ್ಕೊಹರೆನ್ಸಿ ಮಾಡೆಲ್ ಟು ಒಪ್ಟಿಮೈಸ್  ನೆಟ್ವರ್ಕ್ ಬ್ಯಾಂಡ್ ವಿಡ್ತ್ ಎಂಬ ಪ್ರಾಯೋಗಿಕ ಸಂಶೋಧನೆಗೆ ರಾಯಲಸೀಮಾ ಸರಕಾರಿ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

ಜಾಹೀರಾತು

ಹೈದರಾಬಾದಿನ ಅನುರಾಗ್ ವಿಶ್ವವಿದ್ಯಾನಿಲಯದ ಡೀನ್ ಪ್ರೊ. ವಿ. ವಿಜಯಕುಮಾರ್ ಹಾಗೂ ಎನ್..ಟಿ.ಕೆ. ನಿವೃತ್ತ ಪ್ರಾಧ್ಯಾಪಕರಾದ ಡಾ.ಕೆ.ಆರ್.ಕಾಮತ್ ಇವರ ಮಾರ್ಗದರ್ಶನದಲ್ಲಿ ಇವರು ಕೈಗೊಂಡ ಪ್ರಯೋಗದ ಸಾರಾಂಶಗಳು ಯು.ಜಿ.ಸಿ. ಜರ್ನಲ್ಗಳಲ್ಲಿ ಪ್ರಕಟಗೊಂಡಿವೆ. ಅಳಿಕೆ ಹಾಗೂ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿರುವ ಇವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಬಳಂತಿಮೊಗರಿನ ದಿ.ಶ್ಯಾಮ ಭಟ್ ಹಾಗೂ ಸರಸ್ವತಿ ದಂಪತಿ ಪುತ್ರರಾಗಿದ್ದು, ಹುಟ್ಟೂರಲ್ಲಿ ಸಹಜಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts