ಬಂಟ್ವಾಳ

ಶ್ರೀಕೃಷ್ಣ ಮನುಕುಲಕ್ಕೆ ನೀಡಿದ ಸಂದೇಶ ಅಪಾರ: ತಹಸೀಲ್ದಾರ್ ಕೂಡಲಗಿ

ಜಾಹೀರಾತು

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದ ಹಾಲ್ ನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸೀಲ್ದಾರ್ ಎಸ್.ಬಿ.ಕೂಡಲಗಿ, ಶ್ರೀ ಕೃಷ್ಣ ಮನುಕುಲಕ್ಕೆ ನೀಡಿದ ಸಂದೇಶ ಅಪಾರವಾಗಿದ್ದು, ಅನುಷ್ಠಾನ ಮಾಡುವ ಕಾರ್ಯ ನಮ್ಮ ಮೇಲಿದೆ ಎಂದರು.

ಬಂಟ್ವಾಳ ತಾಲೂಕು ಯಾದವ ಸಭಾ ಅಧ್ಯಕ್ಷ ಅಶೋಕ್ ಕುಮಾರ್ ದೀಪ ಪ್ರಜ್ವಲನ ನಡೆಸಿ ಮಾತನಾಡಿ, ಜಗತ್ತಿಗೇ ಉತ್ತಮ ಸಂದೇಶವನ್ನು ಭಗವದ್ಗೀತೆ ಮೂಲಕ ನೀಡಿದ ಶ್ರೀಕೃಷ್ಣ ದೇವರ ಜಯಂತಿಯನ್ನು ಇಂದು ನಾವು ಆಚರಿಸುತ್ತಿದ್ದೇವೆ ಎಂದರು.

ಜಾಹೀರಾತು

ಈ ಸಂದರ್ಭ ಉಪನೋಂದಣಾಧಿಕಾರಿ ಕವಿತಾ, ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯ ಚಿದಂಬರ ಮತ್ತು ನಟರಾಜ್ ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ನವೀನ್ ಬೆಂಜನಪದವು, ದಿವಾಕರ ಮುಗುಳೀಯ, ವಿಜಯ ವಿಕ್ರಮ್ , ಕಂದಾಯ ನಿರೀಕ್ಷಕರಾದ ವಿಜಯ್.ಆರ್, ಜನಾರ್ಧನ.ಜೆ, ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಚುನಾವಣಾ ಶಾಖೆಯ ಶ್ರೀಕಲಾ ಸ್ವಾಗತಿಸಿದರು. ಉಪತಹಸೀಲ್ದಾರ್ ದಿವಾಕರ್ ಮುಗುಳ್ಯ ವಂದಿಸಿದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ