ಹಿರಿಯ ಶಿಕ್ಷಕ ಜಯಾನಂದ ಪೆರಾಜೆ ಅವರಿಗೆ ಅಮೃತ ಸಮ್ಮಾನ ಗೌರವ ಪ್ರಶಸ್ತಿ

ಜಾಹೀರಾತು

ಬಂಟ್ವಾಳ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ  ಸಮಿತಿ ಹುಬ್ಬಳ್ಳಿ ವತಿಯಿಂದ ಉಡುಪಿಯಲ್ಲಿ ಶಿಕ್ಷಕರ ದಿನಾಚರಣೆಯಂದು ಜರಗಿದ  ಶಿಕ್ಷಕ ಸಾಹಿತಿಗಳ ೬ನೆಯ ರಾಜ್ಯ  ಸಮ್ಮೇಳನದಲ್ಲಿ  ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ೩೪ ವರ್ಷ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತರಾದ ಜಯಾನಂದ ಪೆರಾಜೆಯವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಗ್ರಾಮೀಣ ಹಿಂದುಳಿದ ಪ್ರದೇಶದ ಬಡ, ದೀನ, ದಲಿತ ಮಕ್ಕಳಿಗೆ ಶಿಕ್ಷಣ ಹಾಗೂ ತರಬೇತಿಯನ್ನು ನೀಡಿರುವ ಅಮೂಲ್ಯ ಸೇವೆಗೆ ರಾಜ್ಯ ಮಟ್ಟದ ಅಮೃತ ಸಮ್ಮಾನ ಗೌರವ ಪ್ರಶಸ್ತಿ ನೀಡಲಾಗಿದೆ.

ಉಡುಪಿ ಅಂಬಲ್ಪಾಡಿ ಶ್ರೀ ಭವಾನಿ ಸಭಾಂಗಣದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ,ಸಾಹಿತಿ ನೆಂಪು ನರಸಿಂಹ ಭಟ್ಟರ ಅಧ್ಯಕ್ಷತೆಯಲ್ಲಿ  ಸಮ್ಮೇಳನ ಜರಗಿತು. ಮುಖ್ಯ ಅತಿಥಿಗಳಾಗಿ ಧರ್ಮದರ್ಶಿ ಹರಿಕೃಷ್ಣ ಪುನರೂರು, ಅಂಬಲ್ಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ ,  ಉದ್ಯಮಿ ವಿಶ್ವನಾಥ ಶೆಣೈ , ಕ.ಚು.ಸಾ.ಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಹುಬ್ಬಳ್ಳಿ , ಕಾರ್ಯದರ್ಶಿ ಶಾಂತ ಪುತ್ತೂರು , ಡಾ. ವಾಣಿಶ್ರೀ,  ಗುರುರಾಜ ಕಾಸರಗೋಡು, ಸಾವಿತ್ರಿ ಮನೋಹರ್ ಕಾರ್ಕಳ, ಬಹುಭಾಷಾ ಕವಿ ಅಂಶುಮಾಲಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ, ಉಪಾಧಕ್ಷ  ರಾಜು ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿರಿಯ ಶಿಕ್ಷಕ ಜಯಾನಂದ ಪೆರಾಜೆ ಅವರಿಗೆ ಅಮೃತ ಸಮ್ಮಾನ ಗೌರವ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*