ಹವಾಮಾನ ಆಧರಿತ ಬೆಳೆವಿಮೆ: ಅವಧಿ ವಿಸ್ತರಣೆಗೆ ಮನವಿ

ಹವಾಮಾನ ಆಧಾರಿತ ಬೆಳೆ ವಿಮೆ ಪಹಣಿ ಪತ್ರಿಕೆಯಲ್ಲಿ ಬೆಳೆ ನಮೂದಿಸಲು ಅವಧಿ ವಿಸ್ತರಣೆಗೆ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

ಜಾಹೀರಾತು

ಈ ಕುರಿತು ತೋಟಗಾರಿಕಾ ಇಲಾಖೆ ಕಾರ್ಯದರ್ಶಿಗೆ ಅವರು ಪತ್ರ ಬರೆದಿದ್ದಾರೆ.

ಹವಾಮಾನ ಆಧಾರಿತ ಬೆಳೆ ಯೋಜನೆ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ಬೆಳೆ ಸಾಲ ಪಡೆದಿರುವ ಲಕ್ಷಾಂತರ ಅಡಿಕೆ ಬೆಳೆಗಾರರು ಯೋಜನೆ ಪ್ರಯೋಜನ ಪಡೆಯಲು ತಮ್ಮ ವ್ಯಾಪ್ತಿಯ ಪ್ರಾಥಮಿಕ ಕೃಷಿ  ಪತ್ತಿನ ಸಹಕಾರ ಸಂಘದಲ್ಲಿ ಅಡಿಕೆ ಬೆಳೆ ಜಮೀನಿನ ವಿಸ್ತೀರ್ಣಕ್ಕೆ ತಕ್ಕಂತೆ ಬೆಳೆ ವಿಮೆ ಪ್ರೀಮಿಯಂ ಪಾವತಿಸಿರುತ್ತಾರೆ.ಆದರೆ ಅಡಿಕೆ ಬೆಳೆಯುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪಹಣಿ ಪತ್ರಿಕೆಯಲ್ಲಿ ಅಡಿಕೆ ಬೆಳೆ ನಮೂದಾಗಿರದೇ ಬೆಳೆ ವಿಮೆ ಅರ್ಜಿಗಳು ತಿರಸ್ಕಾರವಾಗುವ ಸಂಭವವಿರುತ್ತದೆ. ಸಪ್ಟೆಂಬರ್ 15ರ ಒಳಗೆ ಪಹಣಿ ಪತ್ರಿಕೆಯಲ್ಲಿ ಅಡಿಕೆ ಬೆಳೆ ನಮೂದು ಮಾಡಿಸಲು ರೈತರಿಗೆ ಗಡುವು ನೀಡಿದ್ದು, ತದನಂತರ ಅರ್ಜಿಗಳು ತಿರಸ್ಕಾರವಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದವರು ಹೇಳಿದ್ದಾರೆ.

ಈಗಾಗಲೇ  ಬೆಳೆ ವಿಮೆ ಪ್ರೀಮಿಯಂ ಪಾವತಿಸಿದ ಪೈಕಿ ಶೇ 50ರಷ್ಟು ರೈತರ ಪಹಣಿಯಲ್ಲಿ ಅಡಿಕೆ ಬೆಳೆ ನಮೂದು ಆಗಿರುವುದಿಲ್ಲ. ಸಂಬಂಧ ಪಟ್ಟ ಇಲಾಖೆಯವರು ಮಂದಗತಿಯಲ್ಲಿ ಕಾರ್ಯಪ್ರವೃತ್ತರಾಗಿರುವುದರಿಂದ ಪಹಣಿಯಲ್ಲಿ ಬೆಳೆ ನಮೂದು ಪ್ರಕ್ರಿಯೆ ಪ್ರಗತಿ ಕಂಡಿಲ್ಲ. ಈ ನಿಟ್ಟಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನ್ವಯ ಪಹಣಿಯಲ್ಲಿ ಬೆಳೆ ನಮೂದು ಪ್ರಕ್ರಿಯೆಯನ್ನು ಬೆಳೆ ಸಮೀಕ್ಷೆ ಅವಧಿ ಸೆ.30ರವರೆಗೆ ವಿಸ್ತರಣೆ ಮಾಡಬೇಕು ಅಥವಾ ಹಿಂದಿನ ವರ್ಷಗಳಲ್ಲಿ ಇದ್ದ ಮಾನದಂಡಗಳ ಅನುಸಾರ ಅನುಷ್ಠಾನಗೊಳಸಿಬೇಕು ಎಂದು ವಿನಂತಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹವಾಮಾನ ಆಧರಿತ ಬೆಳೆವಿಮೆ: ಅವಧಿ ವಿಸ್ತರಣೆಗೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*