ಸಹಕಾರ ಸಚಿವರಿಗೆ ಸಹಕಾರಿ ಸಂಘದ ಅಧ್ಯಕ್ಷರ ಪತ್ರ: ‘’ಬಜೆಟ್ ನಲ್ಲಿ ಹೇಳಿದ್ದು ಕಾರ್ಯರೂಪಕ್ಕೆ ತನ್ನಿ’’

ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷ ಹೆಚ್ಚಳ ಆದೇಶ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಹೇಳಿದ್ದನ್ನು ಕಾರ್ಯರೂಪಕ್ಕೆ ತನ್ನಿ, ಇಲ್ಲಿ ಪ್ರತಿನಿತ್ಯ ಸಹಕಾರ ಸಂಘದಲ್ಲಿ ಆದೇಶ ಬಂದಿದೆಯೇ ಎಂದು ಜನರು ಕೇಳುತ್ತಿದ್ದಾರೆ ಎಂದು ಸಹಕಾರ ಸಚಿವರಿಗೆ ಸಿದ್ಧಕಟ್ಟೆ ವ್ಯವಸಾಯ ಸೇವಾ  ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರ ಬರೆದಿದ್ದಾರೆ.

ಪ್ರಭಾಕರ ಪ್ರಭು

ಜಾಹೀರಾತು

ಬಜೆಟ್ ನಲ್ಲಿ ಪ್ರಕಟಿಸಿದಂತೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಬೆಳೆ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹಾಗೂ ಮಧ್ಯಮಾವಧಿ ಕೃಷಿ ಸಾಲದ ಮಿತಿಯನ್ನು 10 ಲಕ್ಷದಿಂದ 15 ಲಕ್ಷಕ್ಕೆ ಹಾಗೂ ರೈತರಿಗೆ ಅನೂಕೂಲವಾಗುವ ರೀತಿಯಲ್ಲಿ ಶೇ 4 ದರದಲ್ಲಿ ಪಿಕಪ್ ವಾಹನ ಖರೀದಿಸಲು ಸಾಲ ನೀಡಲಾಗುವುದೆಂದು ಪ್ರಕಟಿಸಿರುವುದು ಸ್ವಾಗತರ್ಹವಾಗಿದೆ. ಈ ಪ್ರಕಟಣೆಯಂತೆ ರೈತರು ತಮ್ಮ ವ್ಯಾಪ್ತಿಯ ಪ್ರಾಥಮಿಕ ಕೃಷಿ  ಪತ್ತಿನ ಸಹಕಾರ ಸಂಘದಲ್ಲಿ ಅರ್ಜಿಗಳನ್ನು ಸಲ್ಲಿಸಿ ಸಾಲ ಮಿತಿ ಹೆಚ್ಚಳದ ಲಾಭ ಪಡೆಯಲು ನಿರೀಕ್ಷೆಯಲ್ಲಿದ್ದು, ಪ್ರತಿನಿತ್ಯ ಸಹಕಾರ ಸಂಘಗಳಿಗೆ ಹೋಗಿ ವಿಚಾರಿಸುತ್ತಿದ್ದಾರೆ. ಸಾಲ ಮಿತಿ ಹೆಚ್ಚಳವಾಗಿರುವ ಬಗ್ಗೆ ಸರಕಾರದಿಂದ ಆದೇಶ ಬಾರದಿರುವುದರಿಂದ ಪ್ರಾಥಮಿಕ  ಸಹಕಾರ ಸಂಘಗಳು ಹೆಚ್ಚುವರಿ ಸಾಲ ನೀಡಲು ಸಾಧ್ಯವಾಗುತ್ತಿಲ್ಲ.          ಈ ನಿಟ್ಟಿನಲ್ಲಿ ತಾವೂ ಬಜೆಟ್ ನಲ್ಲಿ ಪ್ರಕಟಿಸಿದಂತೆ ಸಾಲಮಿತಿ ಹೆಚ್ಚಳ ಮಾಡಿರುವ ಬಗ್ಗೆ ಸರಕಾರದ ಮಟ್ಟದಲ್ಲಿ ಸೂಕ್ತವಾದ ಆದೇಶ ಹೊರಡಿಸುವಂತೆ ಅವರು ವಿನಂತಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಹಕಾರ ಸಚಿವರಿಗೆ ಸಹಕಾರಿ ಸಂಘದ ಅಧ್ಯಕ್ಷರ ಪತ್ರ: ‘’ಬಜೆಟ್ ನಲ್ಲಿ ಹೇಳಿದ್ದು ಕಾರ್ಯರೂಪಕ್ಕೆ ತನ್ನಿ’’"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*