ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಅಂದು ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ. ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತುಳುಕೂಟ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಸೆ.16ರಂದು ಬಂಟ್ವಾಳದಲ್ಲಿ ತುಳುಕೂಟ ವತಿಯಿಂದ ಹಿರಿಯ ರಂಗಕರ್ಮಿ ಮಂಜು ವಿಟ್ಲ ಅವರಿಗೆ ಸಾರ್ವಜನಿಕ ಸಂತಾಪ ಸೂಚಕ ಸಭೆ"