ಬಂಟ್ವಾಳ

ಸೆ.16ರಂದು ಬಂಟ್ವಾಳದಲ್ಲಿ ತುಳುಕೂಟ ವತಿಯಿಂದ ಹಿರಿಯ ರಂಗಕರ್ಮಿ ಮಂಜು ವಿಟ್ಲ ಅವರಿಗೆ ಸಾರ್ವಜನಿಕ ಸಂತಾಪ ಸೂಚಕ ಸಭೆ

ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಅಂದು  ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ. ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತುಳುಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ