ಬಂಟ್ವಾಳ

ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ: ಕಾಂಗ್ರೆಸ್ ಪಕ್ಷ ಕಾರ್ಯಕರ್ತರು, ಅಭಿಮಾನಿಗಳಿಂದ ಆಚರಣೆ, ಹಲವೆಡೆ ರಕ್ತದಾನ ಶಿಬಿರ, ಸೇವಾ ಕಾರ್ಯ – PHOTOS

ಜಾಹೀರಾತು

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹುಟ್ಟುಹಬ್ಬವನ್ನು ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಅದ್ದೂರಿಯಾಗಿ ಅಭಿಮಾನಿಗಳು ಆಚರಿಸಿದರು. ಎಲ್ಲ ಕಡೆಗಳಿಗೂ ರೈಗಳು ತೆರಳಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಅವರೊಂದಿಗೆ ಕಾಲ ಕಳೆದರು. ವಿವಿಧ ಬ್ಲಾಕ್ ಕಾಂಗ್ರೆಸ್ ಗಳು ಈ ಆಚರಣೆಯನ್ನು ನೆರವೇರಿಸಿದವು. ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಗಳಲ್ಲಿ ಪ್ರತ್ಯೇಕವಾಗಿ ರಕ್ತದಾನ ಶಿಬಿರ ನಡೆದರೆ, ಬಂಟ್ವಾಳದಲ್ಲಿ ಆಟೊ ಸ್ಟ್ಯಾಂಡ್ ಉದ್ಘಾಟನೆಯೂ ನಡೆಯಿತು. ಈ ಆಚರಣೆಗಳ ಚಿತ್ರ-ವಿವರ ಇಲ್ಲಿದೆ. ಮುಂದೆ ಓದಿರಿ.

ರೈ ಅವರ ಪುತ್ರಿ ಚರಿಷ್ಮಾ ರೈ ಅವರು ಬಿ.ಸಿ.ರೋಡಿನ ರಂಗೋಲಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾದ ರೋಷನ್ ರೈ ಬನ್ನೂರು ಇವರ ನೇತೃತ್ವದಲ್ಲಿ ಮಾಜಿ ಸಚಿವ ರಮಾನಾಥ ರೈ ಅವರ 72ನೇ ಹುಟ್ಟುಹಬ್ಬವನ್ನು ಪುತ್ತೂರು ಸಮೀಪ ಪ್ರಜ್ಞಾ ಆಶ್ರಮದಲ್ಲಿ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ತಮ್ಮ ಹುಟ್ಟು ಹಬ್ಬ ಹಿನ್ನೆಲೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಹಾಗೂ ಅಲ್ಪಸಂಖ್ಯಾತರ ಘಟಕ ಪಾಣೆಮಂಗಳೂರು ಬ್ಲಾಕ್ ವತಿಯಿಂದ  ಬಿ. ರಮಾನಾಥ ರೈ  ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಬಿ. ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ನಡೆಯಿತು. 

ಬಂಟ್ವಾಳ ಬೈಪಾಸಿನಲ್ಲಿ ನಿರ್ಮಾಣಗೊಂಡ ರಿಕ್ಷಾ ತಂಗುದಾಣ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಯು .ಬಿ .ವೆಂಕಟೇಶ್ ರವರ 2019 -2020ನೇ ಸಾಲಿನ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಾಣಗೊಂಡಿದ್ದು  ಇದರ ಉದ್ಘಾಟನೆಯನ್ನು  ನೆರವೇರಿಸಲಾಯಿತು.

ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಬಂಟ್ವಾಳಏರ್ಪಡಿಸಿದ ರಕ್ತದಾನ ಶಿಬಿರದಲ್ಲಿ ರೈ ಅವರನ್ನು ಸನ್ಮಾನಿಸಲಾಯಿತು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.