ಜಾತ್ರೆ ಸಂದರ್ಭ ಹಿಂದು ವ್ಯಾಪಾರಸ್ಥರಿಗೆ ಅವಕಾಶ: ಸಂಘಟನೆ ಮನವಿ

ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೈವಸ್ಥಾನ ದೇವಸ್ಥಾನಗಳು ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಹಾಗು ವರ್ಷಂಪ್ರತಿ ನಡೆಯುತ್ತಿರುವಂತ ಜಾತ್ರಾ ಮಹೋತ್ಸವಗಳು ಬ್ರಹ್ಮಕಲಶೋತ್ಸವಗಳು ನೇಮೋತ್ಸವಗಳು ಹಾಗೂ ಸನಾತನ ಹಿಂದೂ ಧರ್ಮದ ಯಾವುದೇ ಉತ್ಸವದ ಕಾರ್ಯಕ್ರಮಗಳಲ್ಲಿ ಅನ್ಯಧರ್ಮಿಯರಿಗೆ ಅವಕಾಶ ನೀಡದೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಎಲ್ಲ ವ್ಯಾಪಾರಸ್ಥರಿಗೆ ಅವಕಾಶ ಮಾಡಿಕೊಡಬೇಕಾಗಿ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ದಕ್ಷಿಣ ಕನ್ನಡ ಜಿಲ್ಲಾ ಸಂಘಟನೆ ಮನವಿ ಮಾಡಿದೆ.

ಜಾಹೀರಾತು

ಮಂಗಳೂರಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಈ ಮನವಿ ಅರ್ಪಿಸಿದೆ.ಹರಾಜು ಪ್ರಕ್ರಿಯೆ ಸಂದರ್ಭ ನೇರ ಆಡಳಿತ ಮಂಡಳಿ ಹಾಗು ಧಾರ್ಮಿಕ ಇಲಾಖೆ ಅಧಿಕಾರಿಗಳು  ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಕಡಿಮೆ ದರದಲ್ಲಿ ವ್ಯಾಪಾರಸ್ಥರಿಗೆ ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿದರು. ಜಾತ್ರೆ ಮುಗಿದ ಬಳಿಕ ಸ್ವಚ್ಛತಾ ಕಾರ್ಯಕ್ಕೆ ಎಲ್ಲರೂ ಆಡಳಿತ ಮಂಡಳಿಯೊಂದಿಗೆ ಕೈಜೋಡಿಸುತ್ತೇವೆ ಎಂದುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ದಿನೇಶ್ ಆಮ್ಟೂರು, ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿಗಾರ್ ಕಲ್ಲಡ್ಕ, ಗೌರವಾಧ್ಯಕ್ಷ  ರವೀಂದ್ರನಾಥ್  ಮನವಿ ನೀಡಿ ವಿನಂತಿಸಿದರು. ಪದಾಧಿಕಾರಿಗಳಾದ ಪ್ರಸಾದ್ ಆರ್ ಶಂಭೂರು, ಧನು ಕುಂಡಡ್ಕ, ರಾಜೇಂದ್ರ ಕೋಟ್ಯಾನ್ ಬೆಳ್ತಂಗಡಿ, ಸತೀಶ್ ಬಂಗೇರ ತುಂಬೆ, ಶಶಿ ಉಜಿರೆ, ಸತೀಶ್ ಪಾಣೆಮಂಗಳೂರು, ಜಗದೀಶ್ ದಾಸ್ ಮಡಂತ್ಯಾರ್, ಪ್ರದೀಪ್ ದಾಸ್, ಸುರೇಂದ್ರ ಭಂಡಾರಿ, ಮೂಲ್ಕಿ ಚರಣ್ ತೊಕ್ಕೋಟ್ಟು, ಪ್ರಾಣೇಶ್  ಜಪ್ಪಿನ ಮುಗೇರು, ಹಾಗು ಸಂಘದ ಸದಸ್ಯರುಗಳು  ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಾತ್ರೆ ಸಂದರ್ಭ ಹಿಂದು ವ್ಯಾಪಾರಸ್ಥರಿಗೆ ಅವಕಾಶ: ಸಂಘಟನೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*