ಬಂಟ್ವಾಳ

ಬಂಟ್ವಾಳ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ವಿಶ್ವಕರ್ಮ ಪೂಜೆ, ಧಾರ್ಮಿಕ ಸಭೆ

ಬಂಟ್ವಾಳ ಅಜೆಕಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘ ವತಿಯಿಂದ 30ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಯಮ ಕ್ಷೇತ್ರದ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಸಮೂಹದ ಆಡಳಿತ ನಿರ್ದೇಶಕ ಡಾ. ರಾಮಕೃಷ್ಣ ಆಚಾರ್ ಅವರನ್ನು ಸನ್ಮಾನಿಸಿದರು.

ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು. ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಕಟಪಾಡಿ ಮಠದ ಗುರುಸೇವಾ ಪರಿಷತ್ತಿನ ಬಂಟ್ವಾಳ ಕ್ಷೇತ್ರದ ಅಧ್ಯಕ್ಷ ಯುವರಾಜ ಆಚಾರ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರತಿಮಾ ಉಪೇಂದ್ರ ಆಚಾರ್ಯ, ಧಾರ್ಮಿಕ ಕಾರ್ಯದರ್ಶಿ ಕಳ್ಳಿಗೆ ನಾರಾಯಣ ಆಚಾರ್ಯ, ಉಪಾಧ್ಯಕ್ಷ ಯಶೋಧರ ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ ಮೊದಲಾದವರು ಉಪಸ್ಥಿತರಿದ್ದರು.ಸಂಘದ ಕಾರ್ಯದರ್ಶಿ ಸಂದೀಪ್ ಬಿ.ಆಚಾರ್ಯ ಪ್ರಸ್ತಾವನೆಗೈದರು. ಸಾಂಸ್ಕೃತಿಕ ಕಾರ್ಯದರ್ಶಿ ಸುನೀಲ್ ಬಿ.ಆಚಾರ್ಯ ಸನ್ಮಾನ ಪತ್ರ ವಾಚಿಸಿದರು. ಮಾಜಿ ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ವಂದಿಸಿದರು. ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಭಜನಾ ಸಂಕೀರ್ತನೆ, ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ