ಬಂಟ್ಚಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಆಶ್ರಯದಲ್ಲಿಬಿ.ಸಿ.ರೋಡಿನ ಶ್ರೀರಕ್ತೇಶ್ವರೀ ದೇವಿ ಸನ್ನಿಧಿಯ ವಠಾರದಲ್ಲಿ4 ದಿನಗಳ ಕಾಲ ಆರಾಧಿಸಲ್ಪಟ್ಟ 44 ನೇ ಸಾರ್ವಜನಿಕ ಶ್ರೀಗಣೇಶನ ಶೋಭಾಯಾತ್ರೆಯು ಶುಕ್ರವಾರ ಸಂಜೆ ಬಿ.ಸಿ.ರೋಡಿನ ರಾ.ಹೆಯಲ್ಲಿ ಅದ್ದೂರಿಯಾಗಿ ನಡೆಯಿತು.
ವಿಸರ್ಜನಾ ಪೂಜೆಯ ಬಳಿಕ ಉತ್ಸವ ಸ್ಥಳದಿಂದ ಹೊರಟ ಶ್ರೀಗಣೇಶನ ಶೋಭಾಯಾತ್ರೆ ತಲಪಾಡಿ ಗಣಪತಿಕಟ್ಟೆಯ ವರೆಗೆ ಸಾಗಿ ಅಲ್ಲಿಂದ ವಾಪಾಸ್ ಅದೇದಾರಿಯಾಗಿ ಬಂದು ಮಯ್ಯರಬೈಲು,ಭಂಡಾರಿಬೆಟ್ಟು,ಬಂಟ್ವಾಳ ನೆರೆವಿಮೋಚನಾ ರಸ್ತೆಯಾಗಿ ತೆರಳಿ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ನೇತ್ರಾವತಿನದಿಯಲ್ಲಿ ಜಲಸ್ತಂಭನಗೊಳಿಸಲಾಯಿತು.
ಬೆಳಿಗ್ಗೆ ಗಣಹೋಮ,ಮಧ್ಯಾಹ್ನ ಮಂಗಳಾರತಿಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯು ನಡಯಿತು. ಬಂಟ್ವಾಳ ಚಿಲಿಪಿಲಿ ಗೊಂಬೆಬಳಗದ ಕೀಲುಕುದುರೆ,ಯಕ್ಷಗಾನಗೊಂಬೆ,ಗೊಂಬೆ
ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಎಂ.ಸತೀಶ್ ಭಂಡಾರಿ,ಪದಾಧಿಕಾರಿಗಳಾದ ಸುರೇಶ್ ಕುಮಾರ್ ಕೈಕಂಬ, ಎಂ.ಸತೀಶ್ ಶೆಟ್ಟಿ ಮೊಡಂಕಾಪು, ಭಾಸ್ಕರ ಟೈಲರ್, ಬಿ.ಮೋಹನ್, ಶ್ರೀಧರ ಶೆಣೈ,ಪುಪ್ಪರಾಜ್ ಶೆಟ್ಟಿ,ಲೋಕನಾಥ ಶೆಟ್ಟಿ,ರಾಜೇಶ್ ಎಲ್.ನಾಯಕ್, ದೇವದಾಸ ಶೆಟ್ಟಿ ಬಂಟ್ವಾಳ, ಭುವನೇಶ್ ಪಚ್ಚಿನಡ್ಕ, ಪ್ರಮೋದ್ ಕುಮಾರ್ ಅಜ್ಜುಬೆಟ್ಟು ,ಗೋಪಾಲ ಸುವರ್ಣ,ಚರಣ್ ಜುಮಾದಿಗುಡ್ಡೆ ,ಬಸ್ತಿಸದಾಶಿವ ಶೆಣೈ ಮೊದಲಾದವರಿದ್ದರು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಸ್ತೆಯುದ್ದಕ್ಕು ಶೋಭಾಯತ್ರೆಯನ್ನು ಕಣ್ತುಂಬಿಕೊಂಡರು.ಬಂಟ್ವಾಳ ನಗರಪೊಲೀಸರು ಬಂದೋಬಸ್ತು ಏರ್ಪಡಿಸಿದ್ದರು.ರಕ್ತೇಶ್ವರೀ ಸನ್ನಿಧಿ ವಠಾರವನ್ನು ಸಂಪೂರ್ಣ ಕೆಸರಿಮಯಗೊಳಿಸಲಾಗಿತ್ತು. ಇನ್ನಷ್ಟು ಚಿತ್ರಗಳಿವೆ ಸ್ಕ್ರೋಲ್ ಮಾಡಿರಿ… (ಚಿತ್ರಗಳು: ಕಿಶೋರ್ ಪೆರಾಜೆ)
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…