ಎರಡು ದಿನಗಳ ಜೇನು ಸಾಕಾಣಿಕೆ ತರಬೇತಿ ಆರಂಭ

ತೋಟಗಾರಿಕೆ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಪಂಚಾಯತ್ ಬಂಟ್ವಾಳ ಇವರ ಜಂಟಿ‌ ಆಶ್ರಯದಲ್ಲಿ ತಾಲೂಕಿನ ಕೃಷಿ ಸಖಿಯರಿಗೆ ಎರಡು ದಿನಗಳ ಕಾಲ ಜೇನು ಸಾಕಣಿಕೆ ತರಬೇತಿ ಕಾರ್ಯಕ್ರಮ ಬಿಸಿರೋಡಿನ ತಾ.ಪಂ.ನ ಎಸ್.ಜಿ.ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಜಾಹೀರಾತು

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾ.ಪಂ.ಸಹಾಯಕ ನಿರ್ದೇಶಕ ದಿನೇಶ್ ಅವರು ಮಾತನಾಡಿ, ಇಲಾಖೆಯಲ್ಲಿ ಸಬ್ಸಿಡಿ ರೂಪದಲ್ಲಿ ಜೇನು ಕೃಷಿ ಮಾಡಲು ಅವಕಾಶವಿದ್ದು, ಮಹಿಳೆಯರು ಹೆಚ್ಚು ಹೆಚ್ಚು ಕೃಷಿಯಲ್ಲಿ ತೊಡಗಿಸಕೊಳ್ಳಬೇಕಾಗಿದೆ ಜೇನು ಕೃಷಿ ಜೀವನದ ಒಂದು ಭಾಗವಾಗಿದ್ದು, ಜೇನು ಕೃಷಿಯನ್ನು ಉತ್ತಮ‌ ಆದಾಯದ ವೃತ್ತಿಯಾಗಿ ಸ್ವೀಕರಿಸಬಹುದು. ವ್ಯಕ್ತಿಯ ಯಶಸ್ವಿಗೆ ಶ್ರಮ,ಸ್ಥಿರತೆ ಅಗತ್ಯವಿದೆ. ಯಾವುದೇ ಉದ್ಯೋಗ ,ಉದ್ಯಮದಲ್ಲಿ ಸಾಧಿಸಲು ಆತ್ಮವಿಶ್ವಾಸ ಅತೀ ಮುಖ್ಯ, ಜೀವನದ ಒಂದು ಭಾಗವಾಗಿ ಹೊಂದಿಸಿಕೊಂಡು ಸಮಯ ನೀಡಬೇಕು ಎಂದು ಅವರು ತಿಳಿಸಿದರು.

ಹಿರಿಯ  ಸಹಾಯಕ ತೋಟಗಾರಿಕಾ  ನಿರ್ದೇಶಕ ಪ್ರದೀಪ್ ಡಿ.ಸೋಜ ಮಾತನಾಡಿ, ಕೃಷಿ ಇಲಾಖೆಯ ಮೂಲಕ ಜೇನು ಕೃಷಿಯನ್ನು ಯಾವ ರೀತಿ ಮಾಡಬಹುದು ಎಂಬ ವಿಚಾರಗಳನ್ನು ತಿಳಿಸಿದರು.ಬಳಿಕ ಜೇನುನೊಣಗಳ ಮತ್ತು ಸಾಕಣೆ ಬಗ್ಗೆ ಮಾಹಿತಿ ನೀಡಿದರು.

ಸಹಾಯಕ ತೋಟಗಾರಿಕಾ ನಿರ್ದೇಶಕ ಮಂಜುನಾಥ್ , ಸಂಪನ್ಮೂಲ ವ್ಯಕ್ತಿ ಗಳಾದ ಲಕ್ಷಣ್ ಗೌಡ ಮತ್ತು ರಾಧಕೃಷ್ಣ ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ತಾಲೂಕು ವ್ಯವಸ್ಥಾಪಕಿ ಸುಧಾ ಸ್ವಾಗತಿಸಿ ವಂದಿಸಿದರು. ವಲಯ ಮೇಲ್ವಿಚಾರಕಿ ದೀಕ್ಷಿತ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎರಡು ದಿನಗಳ ಜೇನು ಸಾಕಾಣಿಕೆ ತರಬೇತಿ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*