ಈ ಕಳ್ಳರು ವಾರಾಂತ್ಯದ ರೈಲನ್ನೇ ಹುಡುಕಿ ಪ್ರಯಾಣಿಕರ ಸೋಗಿನಲ್ಲಿ ಕಳವು ಮಾಡುತ್ತಿದ್ದರು..ವಿಮಾನದಲ್ಲಿ ಬಂದು ರೈಲಿನಲ್ಲಿ ಕಳವು ಮಾಡುತ್ತಿದ್ದ ಖತರ್ನಾಕ್ ಗಳಿವರು.

ಉತ್ತರ ಪ್ರದೇಶದ ಮಿರ್ಜಾಪುರದ ಧೋರುಪುರದ ಅಭಯ್ ರಾಜ್ ಸಿಂಗ್ (26) ಹಾಗೂ ರಾಜ್ ಪುರದ ಹರಿಶಂಕರ್ ಗಿರಿ(25) ಈಗ ರೈಲ್ವೆ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಿದ ವಿಚಾರದಲ್ಲಿ ಮಂಗಳೂರಿನ ಆರ್.ಪಿ.ಎಫ್. ತಂಡಕ್ಕೆ ಸೆರೆಯಾಗಿದ್ದಾರೆ. ರೈಲ್ವೆಯಲ್ಲಿ ಕಳ್ಳತನದ ಘಟನೆಗಳು ಹಲವಾರು ನಡೆಯುತ್ತವೆ. ಆದರೆ ಈ ಕಳ್ಳರ ಕತೆಯೇ ಬೇರೆ. ಇವರು ಉತ್ತರ ಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚಾರ ಮಾಡುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂದರ್ಭ ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದ ಈ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಆಗ ಇವರು ಕಳ್ಳತನ ಎಸಗಿರುವುದಾಗಿ ಒಪ್ಪಿದ್ದರು. ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಆರ್ ಪಿಎಫ್ ತಂಡ ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ತನಿಖೆ ವೇಳೆ ಆರೋಪಿಗಳು ಉತ್ತರಪ್ರದೇಶದಿಂದ ವಿಮಾನದಲ್ಲಿ ಆಗಮಿಸಿ ರಾತ್ರಿ ವೇಳೆ ಸಂಚರಿಸುವ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮಲಗಿದ್ದ ವೃದ್ಧ ಹಾಗೂ ಮಹಿಳಾ ಪ್ರಯಾಣಿಕರ ಚಿನ್ನಾಭರಣಗಳನ್ನು ದೋಚಲು ಪ್ಲ್ಯಾನ್ ಮಾಡುತ್ತಿದ್ದರು. ರಾತ್ರಿ ವೇಳೆ ರೈಲಿನ ವೇಗ ಕಡಿಮೆಯಾಗುತ್ತಿದ್ದಂತೆ ಚಿನ್ನಾಭರಣಗಳನ್ನು ಎಳೆದೊಯ್ದು ಬೋಗಿಯಿಂದ ಹೊರಜಿಗಿದು ಪರಾರಿಯಾಗುತ್ತಿದ್ದರು. ಈ ಕೃತ್ಯ ಎಸಗಲು ಅವರು ವಾರಾಂತ್ಯದ ರೈಲನ್ನೇ ಆಯ್ಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಈ ಕಳ್ಳರು ವಾರಾಂತ್ಯದ ರೈಲನ್ನೇ ಹುಡುಕಿ ಪ್ರಯಾಣಿಕರ ಸೋಗಿನಲ್ಲಿ ಕಳವು ಮಾಡುತ್ತಿದ್ದರು..ವಿಮಾನದಲ್ಲಿ ಬಂದು ರೈಲಿನಲ್ಲಿ ಕಳವು ಮಾಡುತ್ತಿದ್ದ ಖತರ್ನಾಕ್ ಗಳಿವರು."

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*