ಫ್ಯಾಸಿಸಂ ತೊಲಗಿಸಲು ಜಾತ್ಯತೀತರು, ಎಡಶಕ್ತಿಗಳ ಒಗ್ಗಟ್ಟು: ಶಂಕರ್

ದೇಶದ ಆಡಳಿತ ಫ್ಯಾಸಿಸ್ಟರ ಕೈಯಲ್ಲಿದ್ದು, ಒಂದೇ ದೇಶ, ಒಂದು ಚುನಾವಣೆ ನಡೆಸುವ ಹುನ್ನಾರ ನಡೆಸಲಾಗುತ್ತಿದೆ. ದೇಶಕ್ಕೆ ಅಪಾಯಕಾರಿ ಆಗಿರುವ ಫ್ಯಾಸಿಸಂ ತೊಲಗಿಸಲು ಮುಂದಿನ ಚುನಾವಣೆಯಲ್ಲಿ ಜಾತ್ಯತೀತ ಎಡ ಶಕ್ತಿಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸಿಪಿಎಂಎಲ್ ಮುಖಂಡ ಪಾಲಿಟ್ ಬ್ಯುರೊ ಸದಸ್ಯ ಶಂಕರ್ ಅಭಿಪ್ರಾಯಪಟ್ಟರು.

ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದ ಭಾರತ ಕಮ್ಯೂನಿಸ್ಟ್‌ ‌ಪಕ್ಷ (ಮಾರ್ಕ್ಸ್ ವಾದಿ,ಲೆನಿನ್ ವಾದಿ) ಲಿಬರೇಷನ್ ತಾಲೂಕು ಸಮ್ಮೇಳನದಲ್ಲಿ ಅವರು ಮಾತನಾಡಿದರು. ರಾಜ್ಯ ಸಮಿತಿ ಸದಸ್ಯಾದ ಮೋಹನ್.ಕೆ.ಇ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಕ್ಷದ ಮಂಗಳೂರು ತಾಲೂಕು ಕಾರ್ಯದರ್ಶಿ ಭರತ್ ಕುಮಾರ್ ಮಾತನಾಡಿದರು ಸಮ್ಮೇಳನದ ಅದ್ಯಕ್ಷತೆಯನ್ನು ರಾಮಣ್ಣ ವಿಟ್ಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ರಾಜಾ ಚೆಂಡ್ತಿಮಾರ್, ಸರಸ್ವತಿ ಮಾಣಿ, ಅಶ್ರಪ್ ಕೊಯಿಲ ಭಾಗವಹಿಸಿದ್ದರು. ತುಳಸೀದಾಸ್ ವಿಟ್ಲ ಸ್ವಾಗತಿಸಿ ಸಮ್ಮೇಳನದ ವರದಿ ಮಂಡಿಸಿದರು.

ಸಮ್ಮೇಳನದಲ್ಲಿ ನೂತನ ತಾಲೂಕು ಸಮಿತಿ ರಚಿಸಲಾಯಿತು ಕಾರ್ಯದರ್ಶಿಯಾಗಿ ತುಳಸೀದಾಸ್ ವಿಟ್ಲ, ಸದಸ್ಯರುಗಳಾಗಿ ಶಿವರಾಯ ಪ್ರಭು, ಸರಸ್ವತಿ ಮಾಣಿ, ದಿನೇಶ ಆಚಾರಿ ಮಾಣಿ, ದೇವಪ್ಪ ಗೌಡ ಕನ್ಯಾನ, ಸಜೇಶ್ ವಿಟ್ಲ, ಬಾಲಕೃಷ್ಣ  ಚೇಳೂರು, ರಾಜಾ ಚೆಂಡ್ತಿಮಾರ್  ಹಮೀದ್ ಕುಕ್ಕಾಜೆ, ಲಿಯಕತ್ ಖಾನ್ , ಆನಂದ ಶೆಟ್ಟಿಗಾರ್ ಆಯ್ಕೆಯಾದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಫ್ಯಾಸಿಸಂ ತೊಲಗಿಸಲು ಜಾತ್ಯತೀತರು, ಎಡಶಕ್ತಿಗಳ ಒಗ್ಗಟ್ಟು: ಶಂಕರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*