ಬಂಟ್ವಾಳ

ಶನಿವಾರ ಬಂಟ್ವಾಳದಲ್ಲಿ ಬೀದಿನಾಯಿ ಹಿಡೀತಾರೆ!! ಆಮೇಲೆ ಏನ್ಮಾಡ್ತಾರೆ?

ಜಾಹೀರಾತು

ಬಂಟ್ವಾಳ: ಶನಿವಾರ, ಅಂದರೆ ಅಕ್ಟೋಬರ್ 28ರಂದು ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮಂಗಳೂರಿನ ಅನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯವರು ಬೀದಿನಾಯಿಯನ್ನು ಹಿಡಿಯಲಿದ್ದಾರೆ. ಹೀಗಾಗಿ ತಮ್ಮ ಸಾಕುನಾಯಿಗಳನ್ನು ಹೊರಗೆ ಬಿಡಬೇಡಿ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದಿನಾಯಿಗಳ ಸಂತಾನ ನಿಯಂತ್ರಣ (ಎನಿಮಲ್ ಬರ್ತ್ ಕಂಟ್ರೋಲ್ ರೂಲ್ಸ್ 2023) ನಿಯಮಾವಳಿಯಂತೆ, ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೀದಿ ನಾಯಿಗಳನ್ನು ಹಿಡಿದು, ಮಂಗಳೂರಿನ ಅನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯಲ್ಲಿ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸಿ, ರೇಬಿಸ್ ಲಸಿಕೆ ನೀಡಿ, ಮೂರು ದಿನಗಳ ಆರೈಕೆ ಬಳಿಕ ಹಿಡಿದ ಸ್ಥಳಕ್ಕೆ ವಾಪಸ್ ತಂದುಬಿಡುವ ಉದ್ದೇಶಕ್ಕಾಗಿ 28ರಂದು ಶನಿವಾರ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೀದಿ ನಾಯಿಗಳನ್ನು ಅನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯವರು ಹಿಡಿಯಲಿದ್ದಾರೆ. ಪುರಸಭಾ ವ್ಯಾಪ್ತಿಯ ಸಾರ್ವಜನಿಕರು, ಸಾಕುನಾಯಿಗಳನ್ನು ಹೊರಗಡೆ ಬೀದಿಗೆ ಬಿಡದಂತೆ ಬೀದಿನಾಯಿಗಳ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪುರರಸಭೆ ಮುಖ್ಯಾಧಿಕಾರಿ ವಿನಂತಿಸಿದ್ದಾರೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.