ಬಂಟ್ವಾಳ

ಭ್ರಷ್ಟಾಚಾರ ವಿರುದ್ಧ ಅರಿವು: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ  ಬಂಟ್ವಾಳ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ಬಂಟ್ವಾಳ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಸಿಬ್ಬಂದಿ ಕೊರತೆ ಮತ್ತು ಒತ್ತಡಗಳ ಹೊರತಾಗಿಯೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದು ಪ್ರತಿ ಸರ್ಕಾರಿ ನೌಕರನ ಜವಾಬ್ದಾರಿಯಾಗಿದೆ ಎಂದು ಈ ಸಂದರ್ಭ ತಹಸೀಲ್ದಾರ್ ತಿಳಿಸಿದರು.

ಕಚೇರಿಗೆ ಬರುವ ಕಡತಗಳನ್ನು ಸಕಾರಣಗಳಿಲ್ಲದೇ ತಿರಸ್ಕರಿಸಬಾರದು. ಸಾರ್ವಜನಿಕರನ್ನು ಪದೇ ಪದೇ ಅಲೆದಾಡುವಂತೆ ಮಾಡಬಾರದು. ಸಾರ್ವಜನಿಕರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದು  ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಹೇಳಿದರು.

ಈ ಸಂದರ್ಭದಲ್ಲಿ ಖಜಾನಾಧಿಕಾರಿ ಮಹೇಶ್, ಉಪನೊಂದಾವಣಾಧಿಕಾರಿ ಕವಿತಾ, ಭೂಮಾಪನ ಇಲಾಖೆಯ ಪರ್ಯಾವೇಕ್ಷಕರಾದ ಮರುಲಪ್ಪ,  ಉಪತಹಸೀಲ್ದಾರ್ ದಿವಾಕರ ಮುಗುಳೀಯ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ನಿರೂಪಿಸಿ ಕಂದಾಯ ನಿರೀಕ್ಷಕರಾದ ಜನಾರ್ದನ್ ಜೆ ಸ್ವಾಗತಿಸಿ ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.