ಬಂಟ್ವಾಳ

ಅಮ್ಮುಂಜೆಯಲ್ಲಿ ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ವರ್ಷಾಚರಣೆ ಹಿನ್ನೆಲೆ ಕಾರ್ಯಕ್ರಮ – ಸವಿನೆನಪು

ಬಂಟ್ವಾಳ: ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆಯಲ್ಲಿ 2022ರ ನವೆಂಬರ್ 12 ಮತ್ತು 13ರಲ್ಲಿ ನಡೆದಿದ್ದು, ಇದರ ವರ್ಷಾಚರಣೆಯ ನೆನಪಿಗೋಸ್ಕರ ಸವಿನೆನಪು ಎಂಬ ಕಾರ್ಯಕ್ರಮ ನ.11ರಂದು ಶನಿವಾರ ಮಧ್ಯಾಹ್ನ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಉದ್ಘಾಟಿಸುವರು. ಸಮ್ಮೇಳನಾಧ್ಯಕ್ಷ ಪ್ರೊ. ಬಾಲಕೃಷ್ಣ ಗಟ್ಟಿ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ. ಶಂಕರ ಶೆಟ್ಟಿ ಗುಂಡಿಲಗುತ್ತು, ಡಾ. ಎ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಲುವಿಜಾ ಕುಟಿನ್ಹೊ, ಲಕ್ಷ್ಮೀ ಬೆಂಜನಪದವು, ರಾಧಾಕೃಷ್ಣ ತಂತ್ರಿ  ಪೊಳಲಿ,  ಸುಗುಣಾ ಸಂಕಪ್ಪ ಶೆಟ್ಟಿ, ಡಾ. ಮಾಧವ ಎಂ.ಕೆ, ರಾಜೇಶ್ವರಿ, ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ, ಡಿ.ಬಿ.ಅಬ್ದುಲ್ ರಹಿಮಾನ್, ಉಮೇಶ್ ಸಾಲ್ಯಾನ್, ಬಿ.ಮಹಮ್ಮದ್ ಬಟ್ಲಬೆಟ್ಟು ಉಪಸ್ಥಿತರಿರುವರು. ಸಮ್ಮೇಳನದ ಅವಲೋಕನವನ್ನು ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ ಮಾಡುವರು. ಈ ಸಂದರ್ಭ ಕಾಸರಗೋಡು ಪೆರಿಯ ಕೇರಳ ಕೇಂದ್ರೀಯ ವಿವಿ ಸಹಾಯಕ ಪ್ರಾಧ್ಯಾಪಕ ಚೇತನ್ ಮುಂಡಾಜೆ ಉಪನ್ಯಾಸ ನೀಡುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ವಿಠಲ ನಾಯಕ್ ಮತ್ತು ಬಳಗದಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ