ರಸ್ತೆಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಕಾಡಾನೆ…. ವಾಹನ ಸವಾರರೇ ಎಚ್ಚರ!!

 ಚಾರ್ಮಾಡಿ, ಶಿರಾಡಿ, ಸಂಪಾಜೆ ಘಾಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರಾಗಿದ್ದರೆ ಎಡಬಲ ನೋಡಿಕೊಂಡು ಸಾಗುವುದಷ್ಟೇ ಅಲ್ಲ, ಮುಂದೇನು ಇರುತ್ತದೆ ಎಂಬುದೂ ಗಮನದಲ್ಲಿರಲಿ. ಯಾವುದೇ ಹೊತ್ತಿನಲ್ಲಿ ಕಾಡಾನೆಗಳು ಹೆಜ್ಜೆಹಾಕುತ್ತಿರಬಹುದು.

ಜಾಹೀರಾತು

ದೀಪಾವಳಿ ಸಂದರ್ಭ ವಾಹನಗಳ ಭರಾಟೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸಾಕಷ್ಟು ಇರುವಂತೆಯೇ ಕಾಡಾನೆಗಳೂ ಹೊರಗೆ ಬರುತ್ತಿವೆ. ಕಳೆದ ಎರಡು ಮೂರು ದಿನಗಳ ಅವಧಿಯಲ್ಲಿ ಈ ಭಾಗದಲ್ಲಿ ನಡೆದ ಘಟನೆಗಳನ್ನೇ ಅವಲೋಕಿಸಿದರೆ ಇದು ತಿಳಿಯುತ್ತದೆ. ಸುಳ್ಯ ತಾಲೂಕಿನ ಪಂಜಿಕಲ್ಲು ಎಂಬಲ್ಲಿ ಕಾಡಾನೆಯೊಂದು ಹೆದ್ದಾರಿಯಲ್ಲಿ ನಡೆದುಕೊಂಡು ಬರುತ್ತಿರುವುದನ್ನು ಕಂಡ ಬೈಕ್ ಸವಾರರು ಹಾಗು ಪ್ರಯಾಣಿಕರು ಆತಂಕದಿಂದ ಕೆಲ ಕಾಲ ಅಲ್ಲೇ ವಾಹನ ನಿಲ್ಲಿಸಿದರು.ನವೆಂಬರ್ 10ರಂದು ಬೆಳಗ್ಗೆ ಕಾಡಾನೆಯೊಂದು ಪಂಜಿಕಲ್ಲು ಬಳಿಯ ಮುಖ್ಯರಸ್ತೆಯಲ್ಲಿ ರಾಜಾರೋಷವಾಗಿ ನಡೆದುಕೊಂಡು ಸವಾರಿ ನಡೆಸಿದ್ದು, ಸಾರ್ವಜನಿಕರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದರು.

ಜಾಹೀರಾತು

ಜಾಲ್ಸೂರು ಕಾಸರಗೋಡು ಅಂತಾರಾಜ್ಯ ರಸ್ತೆಯಲ್ಲಿ ಏಳು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ಒಂದು ಮರಿಯೂ ಜತೆಗಿತ್ತು. ಹಗಲು ಹೊತ್ತಿನಲ್ಲಿ ಅರಣ್ಯದಲ್ಲಿರುವ ಇವು, ರಾತ್ರಿಯಾಗುತ್ತಿದ್ದಂತೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ, ಮಂಡೆಕೋಲು ಗ್ರಾಮದ ದೇವರಗುಂಡ ಮುರೂರು, ಪಂಜಿಕಲ್ಲು ಗಡಿಭಾಗದಲ್ಲಿ ಸಂಚರಿಸುತ್ತವೆ. 

ಕಳೆದ ಒಂದು ವಾರದಿಂದ ಕಡಬದ ಸಿರಿಬಾಗಿಲು ಗ್ರಾಮದ ರೆಂಜಾಳ, ಪೆರ್ಜೆ ಪ್ರದೇಶದಲ್ಲಿ ಕಾಡಾನೆಗಳ ಅಟ್ಟಹಾಸಕ್ಕೆ ಕೃಷಿ ತೋಟಗಳು ನಾಶವಾಗಿವೆ. ಹಿಂಡುಹಿಂಡಾಗಿ ದಾಳಿ ಮಾಡುವ ಕಾಡಾನೆಗಳು ಶೂರಪ್ಪ ಗೌಡ, ಉಮೇಶ ಗೌಡ ಅವರ ತೋಟಕ್ಕೆ ಲಗ್ಗೆ ಇಟ್ಟು, ಫಲ ನೀಡುತ್ತಿರುವ ತೆಂಗು, ಬಾಳೆ, ಅಡಕೆ ಮರಗಳನ್ನು ನಾಶ ಮಾಡಿವೆ.

ಜಾಹೀರಾತು

ಜಾಹೀರಾತು

ನಾವೂರಿನಲ್ಲಿ ಶುಕ್ರವಾರ ಸಂಜೆ ಒಂಟಿ ಸಲಗ ಕಂಡುಬಂದಿತ್ತು. ಸುಮಾರು 15 ಕಿ.ಮೀ ದೂರ ಅದು ಸಂಚರಿಸಿ, ಶನಿವಾರ ಸಂಜೆ ವೇಳೆಗೆ ಚಾರ್ಮಾಡಿ – ಕನಪಾಡಿ ಅರಣ್ಯದತ್ತ ಸಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಒಂಟಿ ಸಲಗವು ಇಂದಬೆಟ್ಟು, ಮೈಂದಡ್ಕ, ಕಾನರ್ಪ ಮೊದಲಾದ ಕಡೆಗಳ ಜನವಾಸ್ತವ್ಯ ಇರುವ ಪ್ರದೇಶಗಳ ಬದಿಯಲ್ಲೇ ಸಾಗಿದೆ. 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಸ್ತೆಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಕಾಡಾನೆ…. ವಾಹನ ಸವಾರರೇ ಎಚ್ಚರ!!"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*