ಪ್ರಮುಖ ಸುದ್ದಿಗಳು

ಕೇರಳ – ಕರ್ನಾಟಕದ ಕೊಡಗು ಗಡಿಯಲ್ಲಿ ಹೈ ಅಲರ್ಟ್: ವಯನಾಡಿನಲ್ಲಿ ಗುಂಡಿನ ಚಕಮಕಿ

ಕೇರಳದ ಗಡಿ ಜಿಲ್ಲೆ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕರ್ನಾಟಕ ಗಡಿ ನುಸುಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು

ನಕ್ಸಲ್ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗಡಿಭಾಗವಾದ ಬಿರುನಾಣಿ, ತೆರಾಳು, ಪರಕಟಗೆರೆ ಮತ್ತು ಕುಟ್ಟ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೂಂಬಿಂಗ್ ಕಾರ್ಯಾಚರಣೆ ಕುರಿತು ಚರ್ಚಿಸಿದರು.ಕಳೆದ ವಾರವಷ್ಟೇ ಕೇರಳ ಗಡಿಯಲ್ಲಿ ಐವರು ನಕ್ಸಲರು ಹಾಗೂ ಕೇರಳ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದು ಇಬ್ಬರನ್ನು ಬಂಧಿಸಲಾಗಿತ್ತು.

ಜಾಹೀರಾತು

ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಕೊಡಗು ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ.

ಗುಂಡಿನ ಚಕಮಕಿ ನಡೆದ ಜಾಗಕ್ಕೂ ಕೊಡಗಿಗೂ ಕೇವಲ ನಾಲ್ಕೈದು ಕಿಲೋಮೀಟರ್ ಅಷ್ಟೇ ದೂರ. ನಕ್ಸಲರು ಕೇರಳದಿಂದ ಕೊಡಗು ಪ್ರವೇಶಿಸಬಹುದು ಎಂಬ ಶಂಕೆ ಪೊಲೀಸರಿಗೆ ಇದೆ. ಹೀಗಾಗಿ ಕೊಡಗಿನ ಗಡಿಭಾಗದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ