ಕಲ್ಲಡ್ಕ

ವ್ಯಸನಮುಕ್ತ ಸಮಾಜ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸ

ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪದವಿಯ ಸಾಧನ ಭವನದಲ್ಲಿ ವ್ಯಸನಮುಕ್ತ ಸಮಾಜ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಬಂಟ್ವಾಳ ಗ್ರಾಮಾಂತರ ಆರಕ್ಷಕ ಠಾಣೆಯ ಉಪ ನಿರೀಕ್ಷಕರಾಗಿರುವ ಮೂರ್ತಿ ಈ ಸಂದರ್ಭ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಮತ್ತು ಹದಿಹರೆಯದ ವಯಸ್ಸಿನ ಮಕ್ಕಳಲ್ಲಿ ಕಂಡುಬರುವ ಕೆಲವೊಂದು ಅಪರಾಧೀಯ ಕೃತ್ಯಗಳು ಮತ್ತು ಡ್ರಗ್ಸ್ ,ಗಾಂಜಾ, ಬೀಡಿ ,ಸಿಗರೇಟು ಮುಂತಾದ ವ್ಯಸನಗಳಿಗೆ ಒಳಗಾಗುವ ಮತ್ತು  ಅದರ ಪರಿಣಾಮವನ್ನು ತಿಳಿಸಿದರು. ಸಂಚಾರಿ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಬಳಸಬೇಕಾದ ನಿಯಮಗಳು ಮತ್ತು ಜಾಗರೂಕತೆಗಳನ್ನು ವಿವರಿಸಿದರು. ಸಾಮಾಜಿಕ ಜಾಲತಾಣಗಳು ಇಂದು ಯುವಕರನ್ನ ತಪ್ಪು ದಾರಿಗೆ ಕರೆದೊಯ್ಯುವುದರ  ಬಗೆಗೆ  ಜಾಗೃತಿಯನ್ನ ಮೂಡಿಸಿದರು.

ಅಧ್ಯಕ್ಷತೆಯನ್ನು ಪದವಿ ವಿಭಾಗದ ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಯತಿರಾಜ್ ಪಿ ಮತ್ತು ಸಹಯೋಜನಾಧಿಕಾರಿ ದೀಕ್ಷಿತಾ ಉಪಸ್ಥಿತರಿದ್ದರು. ಸ್ವಯಂಸೇವಕಿಯಾದ ಆಶ್ರಿತ ಸ್ವಾಗತಿಸಿ ದ್ವಿತೀಯ ವಾಣಿಜ್ಯ ವಿಭಾಗದ ಜಿತೇಶ್ ವಂದಿಸಿದರು ,ದ್ವಿತೀಯ ಕಲಾ ವಿಭಾಗದ ಪದ್ಮಶ್ರೀ ಪ್ರಾರ್ಥನ ಗೀತೆಯನ್ನು ಹಾಡಿದರು. ವಿಸ್ಮಿತ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.