ಕಂಬಳ ನೋಡಿ ಹಿಂದಿರುಗುತ್ತಿದ್ದ ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರು ಬೋರ್ ವೆಲ್ ಲಾರಿಯೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕುಣಿಗಲ್ ಸಮೀಪ ನಡೆದಿದೆ.
ಜಾಹೀರಾತು
ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿ 33ರಲ್ಲಿ ಘಟನೆ ನಡೆದಿದ್ದು, ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಗ್ರಾಮದ ಬಳಿ ಭಾನುವಾರ ಮುಂಜಾನೆ ಈ ಘಟನೆ ಸಂಭವಿಸಿದೆ.
ಜಾಹೀರಾತು
ಮಂಗಳೂರು ಬಜಪೆ ಮೂಲದ ಕಿಶನ್ ಶೆಟ್ಟಿ (20) ದಕ್ಷಿಣ ಕನ್ನಡ ಜಿಲ್ಲೆ ಭಟ್ರತೋಟ ಗ್ರಾಮದ ಫಿಲಿಪ್ ನೇರಿ ಲೋಬೋ (32) ಸಾವನ್ನಪ್ಪಿದವರು.ನಿತೀಶ ಭಂಡಾರಿ, ಪ್ರೀತಿ ಲೋಬೊ, ಹರೀಶ್ ಎಂಬವರು ತೀವ್ರ ಗಾಯಗಳೊಂದಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೋರ್ ವೆಲ್ ಲಾರಿ ಡಿಕ್ಕಿ, ಕಂಬಳ ನೋಡಿ ವಾಪಸಾಗುತ್ತಿದ್ದ ಮಂಗಳೂರಿನ ಇಬ್ಬರು ಮೃತ್ಯುವಶ"