ಕಲ್ಲಡ್ಕ

ನೆಟ್ಲ ದೇವಸ್ಥಾನದಲ್ಲಿ ವರ್ಷಾವಧಿ ಲಕ್ಷದೀಪೋತ್ಸವ

ಜಾಹೀರಾತು

ಶನಿವಾರ ರಾತ್ರಿ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವರ್ಷಾವಧಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪೂರ್ವಾಹ್ನ ಶುದ್ಧ ಕಲಶ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ರಾತ್ರಿ ಬಲಿ ಉತ್ಸವ ನೆರವೇರಿದವು. ಇದಲ್ಲದೆ, ಶ್ರೀದೇವರ ಸವಾರಿ ಪಡ್ಡಾಯಿಬೈಲು ನಿಂದ ಆರಂಭಗೊಂಡು, ವಿವಿಧೆಡೆ ಸಾಗಿ ರಾತ್ರಿ ಶ್ರೀ ಕ್ಷೇತ್ರದಲ್ಲಿ ಬಲಿ ಉತ್ಸವ ನೆರವೇರಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರಲ್ಲದೆ, ಕ್ಷೇತ್ರದ ಭಕ್ತವೃಂದ ಈ ಸಂದರ್ಭ ಉಪಸ್ಥಿತರಿದ್ದರು.

27ರಂದು ಕಾರ್ತಿಕ ಅಖಂಡ ಭಜನೋತ್ಸವ, ಶತರುದ್ರಾಭಿಷೇಕ: ಸೋಮವಾರ ನ.27ರಂದು ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವರಿಗೆ ಶತರುದ್ರಾಭಿಷೇಕ ನಡೆಯಲಿದೆ. ಸೂರ್ಯೋದಯದಿಂದ 28ರ ಮಂಗಳವಾರ ಸೂರ್ಯೋದಯದವರೆಗೆ ಕಾರ್ತಿಕ ಅಖಂಡ ಭಜನೋತ್ಸವ ನಡೆಯುವುದು. ಸುಮಾರು 22 ಭಜನಾ ತಂಡಗಳು ಭಾಗವಹಿಸಲಿವೆ.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts