ಕಲ್ಲಡ್ಕ

ನೆಟ್ಲ ದೇವಸ್ಥಾನದಲ್ಲಿ ವರ್ಷಾವಧಿ ಲಕ್ಷದೀಪೋತ್ಸವ

ಜಾಹೀರಾತು

ಜಾಹೀರಾತು

ಶನಿವಾರ ರಾತ್ರಿ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವರ್ಷಾವಧಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪೂರ್ವಾಹ್ನ ಶುದ್ಧ ಕಲಶ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ರಾತ್ರಿ ಬಲಿ ಉತ್ಸವ ನೆರವೇರಿದವು. ಇದಲ್ಲದೆ, ಶ್ರೀದೇವರ ಸವಾರಿ ಪಡ್ಡಾಯಿಬೈಲು ನಿಂದ ಆರಂಭಗೊಂಡು, ವಿವಿಧೆಡೆ ಸಾಗಿ ರಾತ್ರಿ ಶ್ರೀ ಕ್ಷೇತ್ರದಲ್ಲಿ ಬಲಿ ಉತ್ಸವ ನೆರವೇರಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರಲ್ಲದೆ, ಕ್ಷೇತ್ರದ ಭಕ್ತವೃಂದ ಈ ಸಂದರ್ಭ ಉಪಸ್ಥಿತರಿದ್ದರು.

27ರಂದು ಕಾರ್ತಿಕ ಅಖಂಡ ಭಜನೋತ್ಸವ, ಶತರುದ್ರಾಭಿಷೇಕ: ಸೋಮವಾರ ನ.27ರಂದು ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವರಿಗೆ ಶತರುದ್ರಾಭಿಷೇಕ ನಡೆಯಲಿದೆ. ಸೂರ್ಯೋದಯದಿಂದ 28ರ ಮಂಗಳವಾರ ಸೂರ್ಯೋದಯದವರೆಗೆ ಕಾರ್ತಿಕ ಅಖಂಡ ಭಜನೋತ್ಸವ ನಡೆಯುವುದು. ಸುಮಾರು 22 ಭಜನಾ ತಂಡಗಳು ಭಾಗವಹಿಸಲಿವೆ.

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ