ಕಲ್ಲಡ್ಕ

ಪೂಪಾಡಿಕಲ್ಲು ನಾರಂಕೋಡಿ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಜಾಹೀರಾತು

ಪೂಪಾಡಿಕಲ್ಲು ನಾರಂಕೋಡಿ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯ ಸುತ್ತಮುತ್ತ ಗಿಡಗಳು ಬೆಳೆದು ನಿಂತು  ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಭಯಡುತ್ತಿರುವುದನ್ನು ಗಮನಿಸಿ ಶೌರ್ಯ ವಿಪತ್ತು ತಂಡದ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು.

ಬಂಟ್ವಾಳ ತಾಲೂಕಿನ  ಬೋಳಂತೂರು ಗ್ರಾಮದ ಪೂಪಾಡಿ ಕಲ್ಲು –  ನಾರಂಕೋಡಿ ರಸ್ತೆಯಲ್ಲಿ ಸಮಸ್ಯೆ ಕುರಿತು ಸ್ಥಳೀಯರ ಮನವಿಗೆ ಸ್ಪಂದಿಸಿದ ಕಲ್ಲಡ್ಕ ಶೌರ್ಯ ವಿಪತ್ತು ತಂಡ ಸದಸ್ಯರು, ರಸ್ತೆಯ ಎರಡು ಬದಿಯಲ್ಲಿ  ಬೆಳೆದ ಗಿಡಗಳನ್ನು ಕಡಿದು ಸ್ವಚ್ಚತೆ ಮಾಡಿದರು. ಈ ರಸ್ತೆಯ ಒಂದು ಭಾಗವು ಬೋಳಂತೂರು ಗ್ರಾಮಕ್ಕೆ ಸೇರಿದ್ದು ಇನ್ನೊಂದು ಬದಿ ಗೋಳ್ತಮಜಲು ಗ್ರಾಮ ಪಂಚಾಯತಿಗೆ ಸೇರಿದೆ. ಈ ಸ್ವಚ್ಛತಾ ಕಾರ್ಯದಲ್ಲಿ ಯೋಜನೆ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ ಕೊಳಕೀರು,ಶೌರ್ಯ ವೀಪತು ತಂಡದ ಅಧ್ಯಕ್ಷ ಮಾಧವ ಸಾಲಿಯಾನ್ ಕುದುರೆಬೆಟ್ಟು, ತಂಡದ ಸಂಯೋಜಕ ವಿದ್ಯಾ, ಕಲ್ಲಡ್ಕ ಒಕ್ಕೂಟ ಸೇವಾ ಪ್ರತಿನಿಧಿ ಗಣೇಶ್, ಶೌರ್ಯ ತಂಡ ಸದಸ್ಯರುಗಳಾದ ವೆಂಕಪ್ಪ ಜಿ, ಮೌರೀಶ್, ರವಿಚಂದ್ರ ಜೋಗಿ,ರಮೇಶ್ ಕುದ್ರೆಬೆಟ್ಟು, ಸಂತೋಷ್ ಬೊಳ್ಪೋಡಿ,ಚಿನ್ನಾ ಕಲ್ಲಡ್ಕ,ಸತೀಶ್ ಮೇಸ್ತ್ರಿ,ಧನಂಜಯ ಕೊಳಕೀರು, ಸ್ಥಳೀಯರಾದ ಹಮೀದ್, ಚರಣ್ ಮೊದಲಾದವರು ಪಾಲ್ಗೊಂಡಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ