ಗೋಮಾಳ ಒತ್ತುವರಿ: ಹಿಂಜಾವೇ, ವಿಹಿಂಪದಿಂದ ಮನವಿ ಸಲ್ಲಿಕೆ

ಕೆದಿಲ ಮತ್ತು ಪೆರಾಜೆ ಗ್ರಾಮಗಳಲ್ಲಿ ಗೋಮಾಳ ಜಮೀನಿನ ಒತ್ತುವರಿಯಾಗಿದ್ದು, ಅವುಗಳನ್ನು ತೆರವುಗೊಳಿಸಿ, ಗಡಿಗುರುತು ನಡೆಸಿ, ಸಂರಕ್ಷಿಸಿ ಉದ್ದೇಶಿತ ಕಾರ್ಯಕ್ಕೆ ಬಳಸುವಂತೆ ಒತ್ತಾಯಿಸಿ ಹಿಂದು ಜಾಗರಣಾ ವೇದಿಕೆ, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಹಯೋಗದಲ್ಲಿ ಬಂಟ್ವಾಳದಲ್ಲಿ ಬುಧವಾರ ಉಪತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕೆದಿಲ ಗ್ರಾಮ ಹಾಗು ಪೆರಾಜೆ ಗ್ರಾಮದ ಗಡಿ ಪ್ರದೇಶವಾದ ಗಡಿಯಾರ ಸ್ವಾಗತ ನಗರದ ಬಳಿ, ಹಾಗು ಪೆರಾಜೆ ಗ್ರಾಮದಲ್ಲಿ ಗೋಮಾಳದ ಜಾಗವಿದ್ದು, ಕೆಲವು ವರುಷಗಳಿಂದ ಅತಿಕ್ರಮಣ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಬ.ಗಣರಾಜ ಭಟ್ ಈ ಸಂದರ್ಭ ಆರೋಪಿಸಿದರು.

ಇಲ್ಲಿ ಮನೆಗಳು ತಲೆ ಎತ್ತಿದ್ದು, ವಿದ್ಯುತ್, ನೀರಾವರಿ ವ್ಯವಸ್ಥೆ ಕಲ್ಪಿಸುವ ಕಾರ್ಯವೂ ಆಗುತ್ತಿದ್ದು, ಅತಿಕ್ರಮಣ ಮಾಡುವವರಿಗೆ ರಕ್ಷಣೆಯನ್ನೂ ಮಾಡಲಾಗುತ್ತಿದೆ. ಹೀಗಾಗಿ ಈ ಕುರಿತು ತೆರವು ಕಾರ್ಯವನ್ನು ಶೀಘ್ರವಾಗಿ ನಡೆಸಬೇಕು ಎಂದು ಅವರು ಈ ಸಂದರ್ಭ ಹೇಳಿದರು.

ಗೋಮಾಳ ಜಮೀನಿನಲ್ಲಿ ಇರುವ ಅಕ್ರಮ ಕಟ್ಟಡ ತೆರವುಗೊಳಿಸಿ, ಜಮೀನನ್ನು ಇಲಾಖೆ ವಶಕ್ಕೆ ಪಡೆಯಬೇಕು ಎಂದು ಹೇಳಿದ ಅವರು, ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಪೆರಾಜೆ ಸಂಚಾಲಕ ಶ್ರೀನಿವಾಸ ಪೆರಾಜೆ, ಕೆದಿಲ ಸಂಚಾಲಕ ವಿಶ್ವನಾಥ ಶೆಟ್ಟಿ ಕೆದಿಲ, ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ನರಸಿಂಹ ಮಾಣಿ, ಪ್ರಶಾಂತ್ ಕೆಂಪುಗುಡ್ಡೆ, ಕುಸುಮಾಧರ, ಸತೀಶ್ , ಲಿಖಿತ್ , ತಿಲಕ್, ವಿಶ್ವಹಿಂದೂ ಪರಿಷತ್  ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ಬಜರಂಗದಳ ಪ್ರಮುಖರಾದ ರೂಪೇಶ್ ಪೂಜಾರಿ,  ಮಹೇಂದ್ರ ಅಶ್ವತ್ತಾಡಿ, ಚಿರಂಜೀವಿ,  ಸತೀಶ್ ಮಿತ್ತೂರು, ಉದಯ ಜೋಗಿಬೆಟ್ಟು, ಹೊನ್ನಪ್ಪ ಬಡೆಕೋಡಿ, ನೇರಳಕಟ್ಟೆ ಸಿ.ಎ.ಬ್ಯಾಂಕ್  ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಾಣಿ, ಗ್ರಾ.ಪಂ.ಸದಸ್ಯರಾದ ಹರೀಶ್ ರೈ ಪೆರಾಜೆ, ರಾಜಾರಾಮ್ ಭಟ್ ಕಾಡೂರು, ಉಮೇಶ್  ಮುರುವ, ಶ್ಯಾಮಪ್ರಸಾದ್ ಭಟ್, ಗ್ರಾಮದ ಪ್ರಮುಖರಾದ ರಾಘವ ಗೌಡ ಪೆರಾಜೆ, ನಟರಾಜ್ ಭಟ್,  ವಕೀಲರಾದ ಅರುಣ್ ಭಟ್, ಗಣಪತಿ ಭಟ್ ಮತ್ತಿತರ ಪ್ರಮುಖರು ಹಾಜರಿದ್ದರು.

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗೋಮಾಳ ಒತ್ತುವರಿ: ಹಿಂಜಾವೇ, ವಿಹಿಂಪದಿಂದ ಮನವಿ ಸಲ್ಲಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*