ಬಂಟ್ವಾಳ

ಗೋಮಾಳ ಒತ್ತುವರಿ: ಹಿಂಜಾವೇ, ವಿಹಿಂಪದಿಂದ ಮನವಿ ಸಲ್ಲಿಕೆ

ಜಾಹೀರಾತು

ಕೆದಿಲ ಮತ್ತು ಪೆರಾಜೆ ಗ್ರಾಮಗಳಲ್ಲಿ ಗೋಮಾಳ ಜಮೀನಿನ ಒತ್ತುವರಿಯಾಗಿದ್ದು, ಅವುಗಳನ್ನು ತೆರವುಗೊಳಿಸಿ, ಗಡಿಗುರುತು ನಡೆಸಿ, ಸಂರಕ್ಷಿಸಿ ಉದ್ದೇಶಿತ ಕಾರ್ಯಕ್ಕೆ ಬಳಸುವಂತೆ ಒತ್ತಾಯಿಸಿ ಹಿಂದು ಜಾಗರಣಾ ವೇದಿಕೆ, ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಹಯೋಗದಲ್ಲಿ ಬಂಟ್ವಾಳದಲ್ಲಿ ಬುಧವಾರ ಉಪತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕೆದಿಲ ಗ್ರಾಮ ಹಾಗು ಪೆರಾಜೆ ಗ್ರಾಮದ ಗಡಿ ಪ್ರದೇಶವಾದ ಗಡಿಯಾರ ಸ್ವಾಗತ ನಗರದ ಬಳಿ, ಹಾಗು ಪೆರಾಜೆ ಗ್ರಾಮದಲ್ಲಿ ಗೋಮಾಳದ ಜಾಗವಿದ್ದು, ಕೆಲವು ವರುಷಗಳಿಂದ ಅತಿಕ್ರಮಣ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಬ.ಗಣರಾಜ ಭಟ್ ಈ ಸಂದರ್ಭ ಆರೋಪಿಸಿದರು.

ಇಲ್ಲಿ ಮನೆಗಳು ತಲೆ ಎತ್ತಿದ್ದು, ವಿದ್ಯುತ್, ನೀರಾವರಿ ವ್ಯವಸ್ಥೆ ಕಲ್ಪಿಸುವ ಕಾರ್ಯವೂ ಆಗುತ್ತಿದ್ದು, ಅತಿಕ್ರಮಣ ಮಾಡುವವರಿಗೆ ರಕ್ಷಣೆಯನ್ನೂ ಮಾಡಲಾಗುತ್ತಿದೆ. ಹೀಗಾಗಿ ಈ ಕುರಿತು ತೆರವು ಕಾರ್ಯವನ್ನು ಶೀಘ್ರವಾಗಿ ನಡೆಸಬೇಕು ಎಂದು ಅವರು ಈ ಸಂದರ್ಭ ಹೇಳಿದರು.

ಗೋಮಾಳ ಜಮೀನಿನಲ್ಲಿ ಇರುವ ಅಕ್ರಮ ಕಟ್ಟಡ ತೆರವುಗೊಳಿಸಿ, ಜಮೀನನ್ನು ಇಲಾಖೆ ವಶಕ್ಕೆ ಪಡೆಯಬೇಕು ಎಂದು ಹೇಳಿದ ಅವರು, ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಪೆರಾಜೆ ಸಂಚಾಲಕ ಶ್ರೀನಿವಾಸ ಪೆರಾಜೆ, ಕೆದಿಲ ಸಂಚಾಲಕ ವಿಶ್ವನಾಥ ಶೆಟ್ಟಿ ಕೆದಿಲ, ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ನರಸಿಂಹ ಮಾಣಿ, ಪ್ರಶಾಂತ್ ಕೆಂಪುಗುಡ್ಡೆ, ಕುಸುಮಾಧರ, ಸತೀಶ್ , ಲಿಖಿತ್ , ತಿಲಕ್, ವಿಶ್ವಹಿಂದೂ ಪರಿಷತ್  ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ಬಜರಂಗದಳ ಪ್ರಮುಖರಾದ ರೂಪೇಶ್ ಪೂಜಾರಿ,  ಮಹೇಂದ್ರ ಅಶ್ವತ್ತಾಡಿ, ಚಿರಂಜೀವಿ,  ಸತೀಶ್ ಮಿತ್ತೂರು, ಉದಯ ಜೋಗಿಬೆಟ್ಟು, ಹೊನ್ನಪ್ಪ ಬಡೆಕೋಡಿ, ನೇರಳಕಟ್ಟೆ ಸಿ.ಎ.ಬ್ಯಾಂಕ್  ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಾಣಿ, ಗ್ರಾ.ಪಂ.ಸದಸ್ಯರಾದ ಹರೀಶ್ ರೈ ಪೆರಾಜೆ, ರಾಜಾರಾಮ್ ಭಟ್ ಕಾಡೂರು, ಉಮೇಶ್  ಮುರುವ, ಶ್ಯಾಮಪ್ರಸಾದ್ ಭಟ್, ಗ್ರಾಮದ ಪ್ರಮುಖರಾದ ರಾಘವ ಗೌಡ ಪೆರಾಜೆ, ನಟರಾಜ್ ಭಟ್,  ವಕೀಲರಾದ ಅರುಣ್ ಭಟ್, ಗಣಪತಿ ಭಟ್ ಮತ್ತಿತರ ಪ್ರಮುಖರು ಹಾಜರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.