ಬಂಟ್ವಾಳ

ಬಂಟ್ವಾಳದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ, ದಿವ್ಯಾಂಗರ ಸಮಸ್ಯೆ ಕುರಿತು ಜಾಗೃತಿ ಕಾರ್ಯಕ್ರಮ

ಜಾಹೀರಾತು

ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ದಿವ್ಯಾಂಗರ ಸಮಸ್ಯೆ ಕುರಿತು ಜಾಗೃತಿ ಕಾರ್ಯಕ್ರಮ ಬಿ.ಸಿ.ರೋಡಿನ ಬಿ.ಜೆ.ಕಾಂಪ್ಲೆಕ್ಸ್ ನಲ್ಲಿರುವ ವಿಕಾಸಂ ಸೇವಾ ಫೌಂಡೇಶನ್ ಸಭಾಂಗಣದಲ್ಲಿ ಭಾನುವಾರ ವಿಕಾಸಂ ಸೇವಾ ಫೌಂಡೇಶನ್ ಮತ್ತು ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಕಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಸುರೇಶ್ ಸಾಲ್ಯಾನ್, ವಿಶೇಷ ಚೇತನ ಮತ್ತು ಅಂಗವಿಕಲರಿಗೆ ನೆರವು ನೀಡಲು ರೋಟರಿ ಸಂಸ್ಥೆ ಸಿದ್ಧವಾಗಿದ್ದು, ಸಮಾಜದ ಮುಖ್ಯ ವಾಹಿನಿಗೆ ಸ್ವಾವಲಂಬಿಗಳಾಗಿ ಮೂಡಿಬರಲು ಸಹಕಾರ ನೀಡುತ್ತೇವೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಸಿ.ಎ.ಶಾಂತಾರಾಮ ಶೆಟ್ಟಿ ಮಾತನಾಡಿ, ಹುಟ್ಟಿನಿಂದಲೇ ಬರುವ ಅಂಗವೈಕಲ್ಯದ ಜೊತೆ ಅಪಘಾತದಿಂದ ಉಂಟಾಗುವ ಆಘಾತಗಳ ಕುರಿತು ಪ್ರಸ್ತಾಪಿಸಿ, ಸಮಾಜ ಇವರ ಜೊತೆಗೆ ನಿಲ್ಲಬೇಕಾಗಿದೆ ಎಂದರು.

ಜಾಹೀರಾತು

ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಪದ್ಮನಾಭ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ವಿಕಾಸಂ ಸೇವಾ ಫೌಂಡೇಶನ್ ನಿರ್ದೇಶಕ ಗೋಪಾಲ್ ಜಿ.ಎಸ್ ವಹಿಸಿದ್ದು, ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಈ ಸಂದರ್ಭ ರೆಡ್ ಕ್ರಾಸ್ ಸಂಸ್ಥೆ ಸದಸ್ಯರಾಗಿರುವ ಪ್ರಭಾಕರ ಶರ್ಮ, ರವೀಂದ್ರನಾಥ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ನ ನಿಯೋಜಿತ ಅಧ್ಯಕ್ಷ ಕಿಶೋರ್, ಪೂರ್ವಾಧ್ಯಕ್ಷರಾದ ಶನ್ಫತ್ ಶರೀಫ್, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಜಯರಾಜ್ ಎಸ್.ಬಂಗೇರ, ಪದಾಧಿಕಾರಿಗಳಾದ ನಾರಾಯಣ ಸಿ.ಪೆರ್ನೆ ಮತ್ತಿತರರು ಉಪಸ್ಥಿತರಿದ್ದು ಶುಭ ಹಾರೈಸಿದರು.

ವಿಶೇಷಚೇತನ ಮಕ್ಕಳ ಗುರುತಿಸುವಿಕೆ ಹಾಗೂ ಬೆಳೆಸುವ ಹಂತದಲ್ಲಿ ಎದುರಿಸಬೇಕಾದ ಸವಾಲುಗಳು, ಅವರಿಗೆ ನೀಡಬೇಕಾದ ಕಾಳಜಿಯ ಕುರಿತು ಪತ್ರಕರ್ತ ಹರೀಶ ಮಾಂಬಾಡಿ ಸ್ವಾನುಭವದ ವಿಚಾರ ಮಂಡಿಸಿದರು. ವಿಕಾಸಂ ನಿರ್ದೇಶಕ ಧರ್ಮಪ್ರಸಾದ್ ರೈ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಮತ್ತೋರ್ವ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ಕಾರ್ಯಕ್ರಮದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ವಿದ್ಯಾರ್ಥಿಗಳಿಗೆ ತರಬೇತಿ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts