ಪ್ರಮುಖ ಸುದ್ದಿಗಳು

ಖ್ಯಾತ ಸಮಾಜಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಸಮಾಜಸೇವಕ, ರಂಗಕರ್ಮಿ ಕಾಪು ಲೀಲಾಧರ ಶೆಟ್ಟಿ ಪತ್ನಿ ಸಮೇತ ನೇಣಿಗೆ ಶರಣಾಗಿದ್ದಾರೆ. ಲೀಲಾಧರ ಶೆಟ್ಟಿ ಅವರಿಗೆ 68 ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರಿಗೆ 58 ವಯಸ್ಸಾಗಿತ್ತು. ಮಂಗಳವಾರ ಮಧ್ಯರಾತ್ರಿ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದುಕೊಂಡು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ.

ಜಾಹೀರಾತು

ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ಚುನಾವಣೆಗೆ ವಿಧಾನಸಭೆಗೆ ಅದೃಷ್ಟ ಪರೀಕ್ಷೆ ಮಾಡಿದ್ದರು. ಕಾಪು ರಂಗತರಂಗ ಎಂಬ ನಾಟಕ ಸಂಸ್ಥೆಯನ್ನು ಸ್ಥಾಪಿಸಿದ ಅವರು ಭಾರಿ ಜನಪ್ರಿಯತೆ ಗಳಿಸಿದ್ದರು. ಅಶಕ್ತರ ನೆರವಿಗೆ ಸದಾ ಮುನ್ನುಗ್ಗುತ್ತಿದ್ದ ಲೀಲಾಧರ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆಪ್ತರಾಗಿದ್ದರು. ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕರಾಗಿದ್ದ ಅವರು, ಅತ್ಯುತ್ತಮ ನಟ ಮತ್ತು ನಿರ್ದೇಶಕರಾಗಿದ್ದರು. ಇತ್ತೀಚೆಗೆ ತನ್ನ ಹೊಸ ನಾಟಕವನ್ನೂ ರಚಿಸಿ, ರಂಗಪ್ರಯೋಗಕ್ಕೆ ತರಲು ಹೊರಟಿದ್ದ ಲೀಲಾಧರ ಶೆಟ್ಟಿ, ಸ್ಥಳೀಯರ ಪಾಲಿನ ಲೀಲಣ್ಣ ದಂಪತಿ ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಆಘಾತಕಾರಿ ಹಾಗೂ ಆಶ್ಚರ್ಯಕಾರಿಯಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.