ಪ್ರಮುಖ ಸುದ್ದಿಗಳು

ಖ್ಯಾತ ಸಮಾಜಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಸಮಾಜಸೇವಕ, ರಂಗಕರ್ಮಿ ಕಾಪು ಲೀಲಾಧರ ಶೆಟ್ಟಿ ಪತ್ನಿ ಸಮೇತ ನೇಣಿಗೆ ಶರಣಾಗಿದ್ದಾರೆ. ಲೀಲಾಧರ ಶೆಟ್ಟಿ ಅವರಿಗೆ 68 ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರಿಗೆ 58 ವಯಸ್ಸಾಗಿತ್ತು. ಮಂಗಳವಾರ ಮಧ್ಯರಾತ್ರಿ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದುಕೊಂಡು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ.

ಜಾಹೀರಾತು

ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ಚುನಾವಣೆಗೆ ವಿಧಾನಸಭೆಗೆ ಅದೃಷ್ಟ ಪರೀಕ್ಷೆ ಮಾಡಿದ್ದರು. ಕಾಪು ರಂಗತರಂಗ ಎಂಬ ನಾಟಕ ಸಂಸ್ಥೆಯನ್ನು ಸ್ಥಾಪಿಸಿದ ಅವರು ಭಾರಿ ಜನಪ್ರಿಯತೆ ಗಳಿಸಿದ್ದರು. ಅಶಕ್ತರ ನೆರವಿಗೆ ಸದಾ ಮುನ್ನುಗ್ಗುತ್ತಿದ್ದ ಲೀಲಾಧರ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆಪ್ತರಾಗಿದ್ದರು. ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕರಾಗಿದ್ದ ಅವರು, ಅತ್ಯುತ್ತಮ ನಟ ಮತ್ತು ನಿರ್ದೇಶಕರಾಗಿದ್ದರು. ಇತ್ತೀಚೆಗೆ ತನ್ನ ಹೊಸ ನಾಟಕವನ್ನೂ ರಚಿಸಿ, ರಂಗಪ್ರಯೋಗಕ್ಕೆ ತರಲು ಹೊರಟಿದ್ದ ಲೀಲಾಧರ ಶೆಟ್ಟಿ, ಸ್ಥಳೀಯರ ಪಾಲಿನ ಲೀಲಣ್ಣ ದಂಪತಿ ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಆಘಾತಕಾರಿ ಹಾಗೂ ಆಶ್ಚರ್ಯಕಾರಿಯಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts