ಜಿಲ್ಲಾ ಸುದ್ದಿ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್ ಸೂಚನೆ

ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.

ಅವರು ಸೋಮವಾರ ಕೋಟೆಕಾರು ಪಟ್ಟಣ ಪಂಚಾಯತ್‍ಗೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡುತ್ತಿದ್ದರು. ನೀರಿನ ಮೂಲದಿಂದ ಮನೆಗೆ ತಲುಪುವ ತನಕ ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಗಮನಹರಿಸಬೇಕು. ಜನರು ಕುಡಿಯುವ ನೀರಿಗೆ ಪರದಾಡುವಂತಹ ಸನ್ನಿವೇಶ ಯಾವುದೇ ಕಾರಣಕ್ಕೂ ಉದ್ಭವವಾಗದಂತೆ ನೊಡಿಕೊಳ್ಳಬೇಕು. ಕೊನೆಯ ಕ್ಷಣದಲ್ಲಿ ಕಾರ್ಯಪ್ರವೃತ್ತರಾಗುವ ಬದಲು ಮುಂದಾಲೋಚನೆಯಿಂದ ಯೋಜನೆಗಳನ್ನು ರೂಪಿಸಿದರೆ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗದು ಎಂದು ಸಚಿವರು ತಿಳಿಸಿದರು.
ಅಭಿವೃದ್ಧಿ ಕಾಮಗಾರಿ, ಫಲಾನುಭವಿ ಆಧಾರಿತ ಯೋಜನೆಗಳು, ಸಮುದಾಯ ಕಾರ್ಯಕ್ರಮಗಳನ್ನು ಆಯಾ ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕು. ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಬಾಕಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿ, ಆರ್ಥಿಕ ಸಂಪನ್ಮೂಲಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ರಹೀಂ ಖಾನ್ ತಿಳಿಸಿದರು.

ಜಾಹೀರಾತು

ಕ್ಲಸ್ಟರ್ ತ್ಯಾಜ್ಯ ನಿರ್ವಹಣೆ ಘಟಕ
ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು ನಗರ ಪಂಚಾಯತ್ ವ್ಯಾಪ್ತಿ ಪ್ರದೇಶಗಳು ಪರಸ್ಪರ ಹತ್ತಿರದಲ್ಲಿವೆÉ. ಪ್ರಸ್ತುತ ಈ ಎಲ್ಲ ಪಟ್ಟಣ ಪ್ರದೇಶಗಳಲ್ಲೂ ತ್ಯಾಜ್ಯ ನಿರ್ವಹಣಾ ಘಟಕಗಳು ಇರುವುದಿಲ್ಲ. ಈ ನಿಟ್ಟಿನಲ್ಲಿ ಮೂರು ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯಗಳನ್ನು ನಿರ್ವಹಿಸಲು ಒಂದೇ ಕಡೆ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದೊಂದು ಉತ್ತಮ ಯೋಚನೆಯಾಗಿದೆ. ಇದರಿಂದ ಈ ಎಲ್ಲ ಪ್ರದೇಶಗಳ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ದೊಡ್ಡ ಮಟ್ಟದ ಘಟಕ ಸ್ಥಾಪಿಸುವ ಮೂಲಕ ನಿರ್ವಹಿಸಬಹುದಾಗಿದೆ. ಈ ಯೋಜನೆ ಕಾರ್ಯಗತಗೊಳಿಸಲು ರಾಜ್ಯ ಸರಕಾರ ಅಗತ್ಯ ಅನುದಾನ ನೀಡಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
ಸಚಿವರು ಕೋಟೆಕಾರು ಪಟ್ಟಣ ಪಂಚಾಯತ್ ಅಭಿವೃದ್ಧಿ ಕಾಮಗಾರಿಗಳ ವಿವರ ಪಡೆದು, ಸಿಬ್ಬಂದಿಗಳ ಕಾರ್ಯವೈಖರಿ ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಾದ ಪುರಂದರ ಕೋಟ್ಯಾನ್, ತೇಜಮೂರ್ತಿ. ಕೋsÀಟೆಕಾರು ಪ.ಪಂ. ಮುಖ್ಯಾಧಿಕಾರಿ ಮಾಲಿನಿ, ಪ.ಪಂ. ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.