ಬಂಟ್ವಾಳ

ಡಿ.26ರಂದು ತುಂಬೆ ನೀರು ಸರಬರಾಜು ಸ್ಥಾವರಕ್ಕೆ ಬೀಗ ಜಡಿದು ಪ್ರತಿಭಟನೆ ಯಾಕೆ? ರೈತಸಂಘ ನೀಡಿದ ಕಾರಣಗಳು ಇವು

ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಮ್ ನಿಂದ ಹರಿದುಹೋಗುವ ನೀರಿನ ರಭಸಕ್ಕೆ 10 ಎಕರೆಯಷ್ಟು ವಿಸ್ತೀರ್ಣದ ತೋಟ, ಗದ್ದೆ ಕೊಚ್ಚಿಹೋಗಿದ್ದು, ಈ ಕುರಿತು ಗಮನ ಸೆಳೆದರೂ ಆಡಳಿತ, ಜನಪ್ರತಿನಿಧಿಗಳು ಕ್ಯಾರೆನ್ನುತ್ತಿಲ್ಲ. ಸತತ ಮನವಿಯ ಬಳಿಕವೂ ಡ್ಯಾಂನಲ್ಲಿ ನೀರು ನಿಲ್ಲುವ ಹಾಗೂ ಬಿಡುವ ವೈಖರಿಯಿಂದಾಗಿ ತೊಂದರೆ ಆಗುತ್ತಿದ್ದು, ಇನ್ನು ನಾವು ಸಹಿಸುವುದಿಲ್ಲ ಎಂದು ಹೇಳಿರುವ ಸಂತ್ರಸ್ತ ರೈತರು, ಡಿಸೆಂಬರ್ 26ರಂದು ತುಂಬೆಯಲ್ಲಿ ಇರುವ ನೀರು ಸರಬರಾಜು ಸ್ಥಾವರಕ್ಕೆ ಬೀಗ ಜಡಿದು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಜಾಹೀರಾತು

ಈ ಕುರಿತು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಎಚ್ಚರಿಸಿದ ರೈತಸಂಘ ಹಸಿರುಸೇನೆ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲಗುತ್ತು, ನೀರು ಬಿಡುವ ರಭಸಕ್ಕೆ ಬೆಳೆ ಕೊಚ್ಚಿಕೊಂಡು ಹೋಗಿದೆ. ಮಹಾನಗರ ಪಾಲಿಕೆಯಿಂದ ನಮ್ಮನ್ನು ಸತಾಯಿಸುವ ಕೆಲಸ ಆಗುತ್ತಿದೆ. ಸರಿ ಮಾಡುತ್ತೇವೆ ಎಂದು ಹೇಳಿ ನಾಲ್ಕು ತಿಂಗಳಾದರೂ ಸುದ್ದಿ ಇಲ್ಲ. ಹೀಗಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದರು.

ಜನಪ್ರತಿನಿಧಿಗಳಿಗೆ ತಿಳಿಸಿದರೂ ಸ್ಪಂದನೆ ಇಲ್ಲ: ಈ ಕುರಿತು ಸ್ಥಳೀಯ ಜನಪ್ರತಿನಿಧಿಗಳು, ಪಾಲಿಕೆ, ಅಧಿಕಾರಿಗಳಿಗೆ ಪತ್ರ ಬರೆದು, ಮೌಖಿಕವಾಗಿ ತಿಳಿಸುತ್ತಾ ಬಂದಿದ್ದರೂ ಯಾವುದೇ ಸ್ಪಂದನೆ ಇಲ್ಲ ಎಂದು ಶ್ರೀಧರ ಶೆಟ್ಟಿ ದೂರಿದರು.ರೈತ ಸಂಘ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಮಾತನಾಡಿ, ಮುಳುಗಡೆಯಾದ ಜಮೀನಿನ ಒರತೆ ಪ್ರದೇಶಕ್ಕೂ ಪರಿಹಾರ ನೀಡಿಲ್ಲ, ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದರು.ರೈತ ಸಂಘ ತಾಲೂಕು ಕಾರ್ಯದರ್ಶಿ ಎನ್. ಇದಿನಬ್ಬ ಮಾತನಾಡಿ, ಕಳೆದ ಭಾನುವಾರ ಏಳು ಮೀಟರ್ ನೀರು ನಿಲ್ಲಿಸಿದ್ದು, ಇದರಿಂದ ನೇಜಿ ಹಾಕಿದ ಗದ್ದೆ, ಕಟಾವು ಮಾಡಿದ ಗದ್ದೆಗಳು ಮುಳುಗಡೆಯಾಗಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತ ರೈತರಾದ ಭಾಸ್ಕರ್, ಆನಂದ ಶೆಟ್ಟಿ, ಮೊಯ್ದಿನಬ್ಬ, ಲೋಕಯ್ಯ ಸಪಲ್ಯ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts