ಶುಕ್ರವಾರ ತಡರಾತ್ರಿ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಸಂದರ್ಭ ಕೆಲ ಯಂತ್ರಗಳಿಗೆ ಹಾನಿಯಾದ ಘಟನೆಯೂ ನಡೆದಿದ್ದು, ರೋಗಿಗಳು ಪಾರಾಗಿದ್ದಾರೆ. ತಾಲೂಕು ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಈ ಘಟನೆ ನಡೆದಿದೆ. ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆ ನಡೆದ ಸಂದರ್ಭ ರೋಗಿಗಳು ಬೆದರಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಸಂದರ್ಭ ಪಕ್ಕದ ವಿಹಿಂಪ ಕಾರ್ಯಾಲಯದಲ್ಲಿದ್ದ ದತ್ತಮಾಲಾಧಾರಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ರಾತ್ರಿ 1 ಗಂಟೆ ವೇಳೆ ಶಾಸಕ ಅಶೋಕ್ ಕುಮಾರ್ ರೈ ಅವರೂ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಬೆಂಕಿ ನಂದಿಸಿದ ಬಳಿಕ ದತ್ತಮಾಲಾಧಾರಿಗಳು ಇಡೀ ಆಸ್ಪತ್ರೆಯನ್ನು ಶುಚಿಗೊಳಿಸಿದ್ದು ಸಾರ್ವತ್ರಿಕ ಶ್ಲಾಘನೆಗೆ ಕಾರಣವಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…