ಬಿ.ಸಿ.ರೋಡ್, ಬಂಟ್ವಾಳ ಪರಿಸರದಲ್ಲಿ ಉತ್ತಮ ಮಳೆ, ಕೃಷಿಕರಿಗೆ ಕಿರಿಕಿರಿ, ರಸ್ತೆ ಪಕ್ಕ ಕೆಸರುಮಯ, ಸೂರಿಲ್ಲದ ಪ್ರಯಾಣಿಕರ ತಂಗುದಾಣಲ್ಲಿ ಕಾಯುವವರಿಗೆ ಸಮಸ್ಯೆ

ಬಂಟ್ವಾಳ: ಬಿ.ಸಿ.ರೋಡ್, ಬಂಟ್ವಾಳ ಸಹಿತ ಬಂಟ್ವಾಳ ತಾಲೂಕಿನ ಕೆಲ ಭಾಗದಲ್ಲಿ ಮಂಗಳವಾರ ರಾತ್ರಿ ಹನಿ ಮಳೆಯಾಗಿದ್ದರೆ, ಬೆಳಗಿನ ಜಾವ ಉತ್ತಮ ಮಳೆಯಾಯಿತು. ಕೆಲವೆಡೆ ರಸ್ತೆಯಲ್ಲಿ ನೀರು ಹರಿದುಹೋಗುವಷ್ಟು ಮಳೆ ಸುರಿದಿದೆ.

ಜಾಹೀರಾತು

ಸಣ್ಣ ಕೃಷಿಕರ ಸಹಿತ ಅಂಗಳದಲ್ಲಿ ಅಡಕೆ ಒಣಗಲು ಹಾಕಿದವರಾದಿಯಾಗಿ ಹಲವು ಕೃಷಿಕರು ಇದರಿಂದ ತೊಂದರೆಗೆ ಒಳಗಾದರು. ಅಂಗಳದಲ್ಲಿ ಹಾಕಿದ ಅಡಕೆ ಒದ್ದೆಯಾಗಿ ಅನಿರೀಕ್ಷಿತ ಮಳೆಯಿಂದ ಕಿರಿಕಿರಿ ಅನುಭವಿಸಿದರು. ಇನ್ನು ಬೆಳಗಿನ ಜಾವ ಕಚೇರಿ, ಶಾಲೆ, ಕಾಲೇಜುಗಳಿಗೆ ತೆರಳುವವರೂ ಮಳೆಯಿಂದ ಸಮಸ್ಯೆ ಅನುಭವಿಸಿದರು. ಈಗ ಹಲವು ಶುಭ ಕಾರ್ಯಗಳು ನಿಗದಿಯಾಗಿದ್ದು, ಅಲ್ಲಿಗೆ ತೆರಳುವವರ ಸಹಿತ ಬಸ್ಸುಗಳಲ್ಲಿ ಸಂಚರಿಸುವವರು, ಬಿ.ಸಿ.ರೋಡಿನಂಥ ಸೂರಿಲ್ಲದ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುವವರು ತೊಂದರೆಗೆ ಒಳಗಾದರು.

ಇಂದು (ಜ.3) ಬೆಳಗ್ಗೆ 8.30ರಿಂದ ಜನವರಿ 3ರ ಬೆಳಗ್ಗೆ 8.30ರ ತನಕದ ಅವಧಿಒಯಲ್ಲಿ ಕೆಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣಹವೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಜನವರಿ 1ರಂದು ಮಧ್ಯಾಹ್ನ ಪ್ರಕಟಿಸಿರುವ ವರದಿ ವಿವರ ನೀಡಿದೆ.

ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಆದಾಗ್ಯೂ, ಹವಾಮಾನಕ್ಕೆ ಸಂಬಂಧಿಸಿದ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡ್, ಬಂಟ್ವಾಳ ಪರಿಸರದಲ್ಲಿ ಉತ್ತಮ ಮಳೆ, ಕೃಷಿಕರಿಗೆ ಕಿರಿಕಿರಿ, ರಸ್ತೆ ಪಕ್ಕ ಕೆಸರುಮಯ, ಸೂರಿಲ್ಲದ ಪ್ರಯಾಣಿಕರ ತಂಗುದಾಣಲ್ಲಿ ಕಾಯುವವರಿಗೆ ಸಮಸ್ಯೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*