ಕಡೇಶಿವಾಲಯ: ರೋಟರಿ ಸಮುದಾಯ ದಳದ ವಾರ್ಷಿಕೋತ್ಸವ

ಕಡೇಶಿವಾಲಯದ ರೋಟರಿ ಸಮುದಾಯ ದಳದ 35 ನೇ ವಾರ್ಷಿಕೋತ್ಸವ, ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪೆರ್ಲಾಪು ಶಾಲಾ ವಠಾರದಲ್ಲಿ ನಡೆಯಿತು.

ಜಾಹೀರಾತು

ಸಭಾಧ್ಯಕ್ಷರಾಗಿ ರೋಟರಿ ಕ್ಲಬ್ ಬಂಟ್ವಾಳ ನಿಯೋಜಿತ ಅಧ್ಯಕ್ಷರಾದ ಬೇಬಿ ಕುಂದರ್ ಅತಿಥಿಗಳಾಗಿ, ಭೂ ಅಭಿವೃದ್ದಿ ಬ್ಯಾಂಕ್ ಬಿ. ಸಿ.ರೋಡ್ ಅಧ್ಯಕ್ಷ ಅರುಣ್ ರೋಶನ್ ಡಿ’ ಸೋಜಾ, ಲಯನ್ಸ್ ಕ್ಲಬ್ ಮಾಣಿ ಅಧ್ಯಕ್ಷರಾದ ಕೂಸಪ್ಪ ಪೂಜಾರಿ ಪುನ್ಕೆದಡಿ, ಝೋಲನ್ ಲೆಫ್ಟಿನೆಂಟ್ ಗವರ್ನರ್ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ರೋಟರಿ ಸಮುದಾಯ ದಳದ ಅಧ್ಯಕ್ಷ ಕಿಶೋರ್ ಕುಮಾರ್ ಬಿ. ಭಾಗವಹಿಸಿದ್ದರು.

ವೇದಿಕೆಯಲ್ಲಿ ಕಡೇಶಿವಾಲಯ ಗ್ರಾಮದ ದ.ಕ. ಜಿ. ಪ. ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯಲ್ಲಿ ಹಾಗೂ ಸರಕಾರಿ ಪ್ರೌಡಶಾಲೆ ಕಡೇಶಿವಾಲಯದಲ್ಲಿ ಎಸ್. ಎಸ್. ಎಲ್. ಸಿ. ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರತಿಭೆ ಪುರಸ್ಕರಿಸಲಾಯಿತು., ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಭವಾನಿ ನೆಕ್ಕಿಲಾಡಿ ಅವರನ್ನು ಸನ್ಮಾನಿಸಲಾಯಿತು., ದ. ಕ. ಜಿಲ್ಲಾ ಅತ್ಯುತ್ತಮ ಪ್ರೌಢಶಾಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸರಕಾರಿ ಪ್ರೌಢಶಾಲೆ ಕಡೇಶಿವಾಲಯದ ಶಿಕ್ಷಕಿಯಾದ ಗೀತಾ ಅವರನ್ನು ಅಭಿನಂದಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಿ. ವಿ. ಡ್ಯಾನ್ಸ್ ಕ್ರಿವ್ ಕಡೇಶಿವಾಲಯ ಅವರಿಂದ ನೃತ್ಯ ಕಾರ್ಯಕ್ರಮ ಮತ್ತು ಶಾರದಾ ಆರ್ಟ್ಸ್ ಐಸಿರಿ ಕಲಾವಿದರ್ ಮಂಜೇಶ್ವರ ಅಭಿನಯದ ಮಲ್ಲ ಸಂಗತಿಯೇ ಅತ್ತು ಎಂಬ ನಾಟಕ ನಡೆಯಿತು.

ಜಾಹೀರಾತು

ಅತಿಥಿಗಳನ್ನು ಸಂಸ್ಥೆಯ ಸಲಹಾ ಸಮಿತಿಯ ಚೇರ್ ಮ್ಯಾನ್ ಕೆ. ಕೆ. ಶೆಟ್ಟಿ ಕುರುಂಬ್ಲಾಜೆ ಸ್ವಾಗತಿಸಿ,ಸಂಸ್ಥೆಯ ಕಾರ್ಯದರ್ಶಿ ಜಹೀರ್ ಪ್ರತಾಪನಗರ ವಂದಿಸಿದರು. ನವೀನ್ ನಾಯ್ಕ್ ಪಿಳಿಂಗಳ ಮತ್ತು ಯೋಗೀಶ್ ನಾಯ್ಕ್ ಡಿ. ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಡೇಶಿವಾಲಯ: ರೋಟರಿ ಸಮುದಾಯ ದಳದ ವಾರ್ಷಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*